ಸಂಗ್ರಹ ಚಿತ್ರ 
ರಾಜ್ಯ

ಭಾರತದಲ್ಲಿ ದುಷ್ಕೃತ್ಯಕ್ಕೆ ಉಗ್ರರ ಸಂಚು ಪ್ರಕರಣ; ಬೆಂಗಳೂರಿನ 6 ಕಡೆ ಎನ್ಐಎ ದಾಳಿ

ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ.

ಶಂಕಿತ ತಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ.

ಬಂಧಿತ ಶಂಕಿತ ಉಗ್ರ ಈ ವಿಚಾರದಲ್ಲಿ ಹಲವು ಮಾಹಿತಿ ನೀಡಿದ್ದು, ಆತನಿಂದ ಪಡೆದ ಮಾಹಿತಿಯಂತೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿ ಬಂಧನವಾಗಿದ್ದ ಐವರು ಶಂಕಿತ ಉಗ್ರರ ಪ್ರಕರಣಕ್ಕೆ ಸಂಬಂಧಿಸಿ ದಾಳಿಗಳು ನಡೆದಿವೆ. ಮುದಾಸಿರ್, ಜಾಹಿದ್, ತಬ್ರೇಜ್ ಮಹಮದ್ ಉಮರ್ ಸೇರಿ 5 ಜನರನ್ನು ಬಂಧಿಸಲಾಗಿತ್ತು.

ಹೆಬ್ಬಾಳ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಮೊದಲು ಸಿಸಿಬಿ ಅಧಿಕಾರಿಗಳು ಜುಲೈ 1ರಂದು ದಾಳಿ ಮಾಡಿದ್ದರು. ಈ ವೇಳೆ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ಈ ಪ್ರಕರಣ ಇತ್ತೀಚೆಗಷ್ಟೇ ಎನ್‌ಐಎಗೆ ವರ್ಗಾವಣೆ ಆಗಿತ್ತು.

ವಿಚಾರಣೆಯ ವೇಳೆ ವಿದೇಶದಿಂದ ಜುನೈದ್ ಎಂಬ ಉಗ್ರ ಆಪರೇಟ್ ಮಾಡುತ್ತಾ ಇದ್ದದ್ದು ಬೆಳಕಿಗೆ ಬಂದಿತ್ತು. ಜೊತೆಗೆ ಸರಣಿ ಬಾಂಬ್ ಬ್ಲಾಸ್ಟ್ ರೂವಾರಿ ನಾಸೀರ್ ಜೈಲಿನಲ್ಲಿ ಈ ಶಂಕಿತರಿಗೆ ಭಯೋತ್ಪಾದಕ ಕೃತ್ಯಗಳ ತರಬೇತಿ ನೀಡಿದ್ದ ಎಂಬುದು ತಿಳಿದುಬಂದಿತ್ತು.

ಈ‌ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಇಂದು ನಡೆಸಿರುವ ದಾಳಿಯಲ್ಲಿ ಆರು ಕಡೆ ಮನೆಗಳ ಪರಿಶೀಲನೆ ಮಾಡಿದೆ. ದಾಳಿಯಲ್ಲಿ ಮತ್ತಷ್ಟು ವಿಚಾರಗಳು ಬಯಲಾಗುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel