ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಮಂಗಳಾ ಈಜುಕೊಳದಲ್ಲಿ ಮುಳುಗಿ ಗುರುಗ್ರಾಮದ ಪ್ರವಾಸಿಗ ಸಾವು

ಮಂಗಳೂರಿನ ಲೇಡಿಹಿಲ್‌ನ ಮಂಗಳಾ ಈಜುಕೊಳದ ನೀರಿನಲ್ಲಿ ಮುಳುಗಿ 30 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಇಲ್ಲಿನ ಲೇಡಿಹಿಲ್‌ನ ಮಂಗಳಾ ಈಜುಕೊಳದ ನೀರಿನಲ್ಲಿ ಮುಳುಗಿ 30 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಹರಿಯಾಣದ ಗುರುಗ್ರಾಮದ ಅಭಿಷೇಕ್ ಆನಂದ್ (30) ಎಂದು ಗುರುತಿಸಲಾಗಿದ್ದು, ಅವರು ನಗರದಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಮಂಗಳವಾರ ಸಂಜೆ ಮಂಗಳಾ ಈಜುಕೊಳದಲ್ಲಿ ಈಜುತ್ತಿದ್ದಾಗ ಏಕಾಏಕಿ ನೀರಿನಲ್ಲಿ ಮುಳುಗಿದ್ದಾರೆ. ಕೂಡಲೇ ಜೀವರಕ್ಷಕರು ಅವರನ್ನು ಈಜುಕೊಳದಿಂದ ಮೇಲಕ್ಕೆಳೆದು ಆಸ್ಪತ್ರೆಗೆ ಸಾಗಿಸಿದರೂ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಮೃತರ ಕುಟುಂಬ ಸದಸ್ಯರು ಬುಧವಾರ ಇಲ್ಲಿಗೆ ಆಗಮಿಸುವ ನಿರೀಕ್ಷೆಯಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಸಕ್ತ ಸಾಲಿನ ಅಂತಿಮ ದ್ವೈಮಾಸಿಕ ಹಣಕಾಸು ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ

'ಗಾಂಧಿಯ ಅಹಿಂಸಾ ತತ್ವಕ್ಕೆ ಬಿಜೆಪಿ ಅವಮಾನ; 'ಗೋದಿ ಮಾಧ್ಯಮ' ಈ ಜಾಹೀರಾತು ಪ್ರಕಟಿಸಬಾರದಿತ್ತು'

ಚೆನ್ನೈನಲ್ಲಿ ಭಾರಿ ಪ್ರಮಾಣದಲ್ಲಿ ಕಾಗೆಗಳ ಸಾವು; ಹೈ ಅಲರ್ಟ್ ಘೋಷಣೆ

U19 World Cup 2026 Final: 80 ಎಸೆತಗಳಲ್ಲಿ 175 ರನ್; ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಇಂಗ್ಲೆಂಡ್ ತತ್ತರ, ದಾಖಲೆಗಳ ಸುರಿಮಳೆ!

T20 World Cup 2026: ಟೀಂ ಇಂಡಿಯಾಗೆ ಸಂಕಷ್ಟ; ಪಂದ್ಯಾವಳಿಯಿಂದಲೇ ಹೊರಗುಳಿದ ಹರ್ಷಿತ್ ರಾಣಾ!

SCROLL FOR NEXT