ಬೆಂಗಳೂರು ಟ್ರಾಫಿಕ್ 
ರಾಜ್ಯ

ಬೆಂಗಳೂರಿನಲ್ಲಿ ಪ್ರತಿದಿನ 500 ಹೊಸ ನಾಲ್ಕು ಚಕ್ರದ ವಾಹನ, 1,300 ದ್ವಿಚಕ್ರ ವಾಹನ ರಸ್ತೆಗಿಳಿಯುತ್ತಿವೆ: ಡಿಕೆಶಿ

ಬೆಂಗಳೂರಿನಲ್ಲಿ ಪ್ರತಿದಿನ 1,300 ದ್ವಿಚಕ್ರ ವಾಹನಗಳು ಮತ್ತು ಸುಮಾರು 490 ನಾಲ್ಕು ಚಕ್ರದ ವಾಹನಗಳು ಹೊಸದಾಗಿ ನೋಂದಣಿಯಾಗುತ್ತಿದ್ದು, ನಗರ ಜೀವನದ ಗುಣಮಟ್ಟ ಖಚಿತಪಡಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ ಎಂದು ಉಪಮುಖ್ಯಮಂತ್ರಿ...

ಬೆಳಗಾವಿ: ಬೆಂಗಳೂರಿನಲ್ಲಿ ಪ್ರತಿದಿನ 1,300 ದ್ವಿಚಕ್ರ ವಾಹನಗಳು ಮತ್ತು ಸುಮಾರು 490 ನಾಲ್ಕು ಚಕ್ರದ ವಾಹನಗಳು ಹೊಸದಾಗಿ ನೋಂದಣಿಯಾಗುತ್ತಿದ್ದು, ನಗರ ಜೀವನದ ಗುಣಮಟ್ಟ ಖಚಿತಪಡಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ರಾಜಧಾನಿಯಲ್ಲಿ ಸುಗಮ ಸಂಚಾರ ಮತ್ತು ನಗರವನ್ನು ಸುರಕ್ಷಿತಗೊಳಿಸುವ ಕುರಿತು ಬಿಜೆಪಿ ಎಂಎಲ್ ಸಿಗಳಾದ ಭಾರತಿ ಶೆಟ್ಟಿ ಮತ್ತು ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ನಗರದಲ್ಲಿ 1.30 ಕೋಟಿ ಜನರಿದ್ದರೆ, ವಾಹನಗಳ ಸಂಖ್ಯೆ ಸುಮಾರು 1.16 ಕೋಟಿ ಇದೆ ಎಂದು ಹೇಳಿದರು.

ನಗರದಲ್ಲಿ ಜನಸಂಖ್ಯೆ ಮತ್ತು ವಾಹನ ಸಂಖ್ಯೆ ಅತ್ಯಂತ ವೇಗವಾಗಿ ಹೆಚ್ಚುತ್ತಿದ್ದು, ನೀರು, ಸಂಚಾರ ದಟ್ಟಣೆ ಮತ್ತು ಹಸಿರಿಗೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸುವುದು ಪ್ರಮುಖ ಸವಾಲಾಗಿದೆ. ಈ ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದರು.

ಈ ನಿರ್ಣಾಯಕ ಸಮಸ್ಯೆಗಳನ್ನು ಹೇಗೆ ಪರಿಹರಿಸಬೇಕೆಂದು ಈಗಾಗಲೇ ಜನರಿಂದ ಸಲಹೆಗಳನ್ನು ಪಡೆಯಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಈಗಾಗಲೇ ರಾಜ್ಯದ ಜನರಿಂದ ಮತ್ತು ವಿದೇಶದಲ್ಲಿ ನೆಲೆಸಿರುವವರಿಂದ 70,000 ಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಲಾಗಿದೆ. ಅಲ್ಲದೆ ತಜ್ಞರಿಂದಲೂ ನಾವು ಸಲಹೆಗಳನ್ನು ಪಡೆದಿದ್ದೇವೆ ಎಂದು ಡಿಸಿಎಂ ತಿಳಿಸಿದರು.

ಈ ವೇಳೆ ಹಾಜರಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಜನರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸುವ ಮತ್ತು ಅಪರಾಧಿಗಳ ಮೇಲೆ ನಿಗಾ ವಹಿಸುವ ಸಂಬಂಧ ಸರ್ಕಾರ ಈಗಾಗಲೇ ನಗರದಲ್ಲಿ ಸುಮಾರು 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದೆ ಎಂದರು.

ಮುಂದಿನ ದಿನಗಳಲ್ಲಿ ನಗರದಲ್ಲಿ ನಿರ್ಭಯಾ ಯೋಜನೆಯಡಿ ಸುಮಾರು 2,500 ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಸಾರ್ವಜನಿಕ ದಟ್ಟಣೆ ಹೆಚ್ಚಿರುವ ಶಿಕ್ಷಣ ಸಂಸ್ಥೆಗಳು, ಮಾಲ್‌ಗಳಂತಹ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT