ಸಿಎಂ ಸಿದ್ದರಾಮಯ್ಯ 
ರಾಜ್ಯ

ದಲಿತರ ಶ್ರೇಯೋಭಿವೃದ್ಧಿಗೆ ಎಸ್‌ಸಿಪಿ/ಟಿಎಸ್‌ಪಿ: ಕಾಯ್ದೆಯಾಗಿ ಜಾರಿಯಾಗಲಿ, ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬಿಜೆಪಿ ದಲಿತ ಮತ್ತು ಶೋಷಿತ ವಿರೋಧಿ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರು ಹಾಗೂ ಬುಡುಕಟ್ಟ ಸಮುದಾಯದ ಶ್ರೇಯೋಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಗಳನ್ನು (ಎಸ್‌ಸಿಪಿ/ಟಿಎಸ್‌ಪಿ) ಕಾಯ್ದೆಯಾಗಿ ಜಾರಿಗೆ ತರಲಿ ಎಂದು ಬಿಜೆಪಿ ಮುಖಂಡರು ಹಾಗೂ ಅವರ ಚುನಾಯಿತ ಪ್ರತಿನಿಧಿಗಳಿಗೆ ಸವಾಲು ಹಾಕಿದರು. 

ಬೆಳಗಾವಿ: ಬಿಜೆಪಿ ದಲಿತ ಮತ್ತು ಶೋಷಿತ ವಿರೋಧಿ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರು ಹಾಗೂ ಬುಡುಕಟ್ಟ ಸಮುದಾಯದ ಶ್ರೇಯೋಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಗಳನ್ನು (ಎಸ್‌ಸಿಪಿ/ಟಿಎಸ್‌ಪಿ) ಕಾಯ್ದೆಯಾಗಿ ಜಾರಿಗೆ ತರಲಿ ಎಂದು ಬಿಜೆಪಿ ಮುಖಂಡರು ಹಾಗೂ ಅವರ ಚುನಾಯಿತ ಪ್ರತಿನಿಧಿಗಳಿಗೆ ಸವಾಲು ಹಾಕಿದರು. 

ವಿಧಾನ ಪರಿಷತ್ತಿನಲ್ಲಿ ಗುರುವಾರ ಪೂರಕ ಅಂದಾಜು ಮಂಡನೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕಾಯ್ದೆಯನ್ನು ಜಾರಿಗೆ ತರುವಂತೆ ಬಿಜೆಪಿ ನಾಯಕರನ್ನು ಕೇಳಿದರು. ಬಿಜೆಪಿ ಎಂಎಲ್ಸಿಗಳು ಮತ್ತು ಸಂಸದರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ, ದೇಶದಲ್ಲಿ ಇದೇ ರೀತಿಯ ಕಾಯ್ದೆಯನ್ನು ಜಾರಿಗೆ ತರುವಂತೆ  ಸವಾಲು ಹಾಕುತ್ತೇನೆ ಎಂದರು. 

ಕಾಯ್ದೆ ಕುರಿತು ವಿವರಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿನ ಎಸ್‌ಸಿ/ಎಸ್‌ಟಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ಮೀಸಲಿಡಲು ಕಾಂಗ್ರೆಸ್‌ ಸರ್ಕಾರ 2013ರಲ್ಲಿ ಕಾಯ್ದೆ ತಂದಿತ್ತು.''ಅಲ್ಲಿಯವರೆಗೆ ಸರಕಾರ ಎಸ್‌ಸಿ ಮತ್ತು ಎಸ್‌ಟಿಗಳ ಕಲ್ಯಾಣಕ್ಕಾಗಿ ಸುಮಾರು ರೂ. 6,000 ರಿಂದ 7,000 ಕೋಟಿ ರೂ.  ಅನುದಾನ ಮಾತ್ರ ಮಾತ್ರ ನೀಡಲಾಗುತಿತ್ತು. ಆದರೆ ಕಾಯ್ದೆ ಜಾರಿ ನಂತರ ಆಂಧ್ರಪ್ರದೇಶದ ನಂತರ ದೇಶದಲ್ಲಿಯೇ ಕರ್ನಾಟಕ ಎರಡನೇ ರಾಜ್ಯ ಎನಿಸಿಕೊಂಡಿತು. ಈ ಸಮುದಾಯಕ್ಕೆ ವಾರ್ಷಿಕವಾಗಿ ರೂ. 30,000 ಕೋಟಿ ಅನುದಾನ ಒದಗಿಸುತ್ತಿದೆ ಎಂದರು.

ಈ ಮಧ್ಯೆ  ಪಿಎಂ ಮೋದಿ ಹೆಸರನ್ನು ಪ್ರಸ್ತಾಪಿಸಿದ ಬಿಜೆಪಿ ಎಂಎಲ್‌ಸಿಗಳು ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಕೂಗಲು ಪ್ರಾರಂಭಿಸಿದರು, ಪಕ್ಷವನ್ನು ದಲಿತ ವಿರೋಧಿ ಎಂದು ಕರೆದರು. ಗ್ಯಾರಂಟಿ ಯೋಜನೆಗಳಾಗಿ ರೂ. 11,000 ಕೋಟಿ ಎಸ್‌ಸಿಪಿ/ಟಿಎಸ್‌ಪಿ ನಿಧಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಎಂಎಲ್ಸಿಗಳಾದ ರವಿಕುಮಾರ್ ಮತ್ತು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕೋಟಾ ಶ್ರೀನಿವಾಸ್ ಪೂಜಾರ್ ಮತ್ತು ವೈ ಎ ನಾರಾಯಣಸ್ವಾಮಿ ಮತ್ತಿತರರು ಇದಕ್ಕೆ ಧ್ವನಿಗೂಡಿಸಿದರು. 

ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಸದಸ್ಯರನ್ನು ನೋಡಿ ಕಾಂಗ್ರೆಸ್ ಸದಸ್ಯರು, ಸಚಿವರು ಬಿಜೆಪಿ ಎಂಎಲ್‌ಸಿಗಳ ವಿರುದ್ಧ ಕಿಡಿಕಾರಿದರು. ಈ ನಡುವೆಯೇ ಭಾಷಣ ಮುಂದುವರಿಸಿದ ಸಿದ್ದರಾಮಯ್ಯ, ಸಂವಿಧಾನ ಬದಲಿಸಲು ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಅವರದೇ ಪಕ್ಷದ ಅನಂತಕುಮಾರ್ ಹೆಗಡೆ ಹೇಳಿದ್ದರು. ಬಿಜೆಪಿಯವರು ಸಂವಿಧಾನ ವಿರೋಧಿಗಳು.“ಇದು ನಿಮ್ಮ ನಿಜವಾದ ಉದ್ದೇಶ. ಹೀಗಾಗಿ ದಲಿತರು ಮತ್ತು ಸಾಮಾಜಿಕ ಸಮಾನತೆಯ ಬಗ್ಗೆ ಮಾತನಾಡುವ ನೈತಿಕ ಹಕ್ಕು ನಿಮಗಿಲ್ಲ' ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT