ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

ನ್ಯುಮೋನಿಯಾ, ಶಿಶು ಮರಣ ತಗ್ಗಿಸಲು ಕ್ರಮ: ತಾಯಂದಿರ ಹಾಲಿನ ಬ್ಯಾಂಕ್ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಿಗೆ ಸೂಕ್ತವಾದ ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.

ಬೆಳಗಾವಿ: ಮಕ್ಕಳಿಗೆ ಸೂಕ್ತವಾದ ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.

ನ್ಯುಮೋನಿಯಾ ತೊಲಗಿಸಿ ಆರೋಗ್ಯವಂತ ಬಾಲ್ಯ ಒದಗಿಸಿ’ ಶೀರ್ಷಿಕೆಯಡಿ ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲುಣಿಸುವಿಕೆಯನ್ನು ಉತ್ತೇಜಿಸುವಲ್ಲಿ ಹಾಲಿನ ಬ್ಯಾಂಕುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಇದು ಮಕ್ಕಳ ಅಕಾಲಿಕ ಮರಣ, ಅನಾರೋಗ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಲ್ಲದೆ, ರಾಜ್ಯದ ಪ್ರತಿ ಕಂದಾಯ ವಿಭಾಗಕ್ಕೆ ಒಂದು ಎಂಬಂತೆ ನವಜಾತ ಶಿಶುಗಳ ಆ್ಯಂಬುಲೆನ್ಸ್ ಗಳನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್ ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ನಿರ್ದೇಶಕರಾದ ಡಾ. ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT