ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸಕೋಟೆ ವೃದ್ಧ ದಂಪತಿ ಕೊಲೆ ಪ್ರಕರಣ: ಆಸ್ತಿಗಾಗಿ ಮಗ, ಸೊಸೆ ಮೊಮ್ಮಕ್ಕಳಿಂದ ಹತ್ಯೆ, ಅಪ್ರಾಪ್ತ ಸೇರಿ ನಾಲ್ವರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ರಾಮಕೃಷ್ಣಪ್ಪ (70) ಮತ್ತು ಅವರ ಪತ್ನಿ ಮುನಿರಾಮಕ್ಕ (65) ಅವರನ್ನು ಶನಿವಾರ ವಾಲ್ಮೀಕಿ ನಗರದ ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಮಗ ನರಸಿಂಹ, ಸೊಸೆ ಭಾಗ್ಯ ಮತ್ತು ಇಬ್ಬರು ಮೊಮ್ಮಕ್ಕಳು ಸೇರಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರ ಪ್ರಕಾರ ಮೊಮ್ಮಕ್ಕಳಲ್ಲಿ ಒಬ್ಬ ಅಪ್ರಾಪ್ತನಾಗಿದ್ದಾನೆ.

ನರಸಿಂಹ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದ. ಅವನ ಹೆಂಡತಿ ಹೆತ್ತವರ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡು ಅವನ ಸಾಲವನ್ನು ತೀರಿಸಲು ಆಸ್ತಿ ಮಾರಾಟ ಮಾಡಲು ಒತ್ತಾಯಿಸುತ್ತಿದ್ದಳು. ಆದರೆ ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ತಮ್ಮ ಆಸ್ತಿಯನ್ನು ತಮ್ಮ ಐದು ಮಕ್ಕಳಿಗೆ  ಅಂದರೆ, ಮಗ ಮತ್ತು ನಾಲ್ಕು ಹೆಣ್ಣು ಮಕ್ಕಳಿಗೆ ಸಮಾನವಾಗಿ ಹಂಚಿಕೊಳ್ಳಬೇಕೆಂದು ಬಯಸಿದ್ದರು. ಇದರಿಂದ ಹತಾಶಳಾದ ಭಾಗ್ಯ ಮತ್ತು ಆಕೆಯ ಮಕ್ಕಳು ದಂಪತಿಯ ತಲೆಗೆ ಕಬ್ಬಿಣದ ರಾಡ್‌ಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ನರಸಿಂಹ ಕೊಲೆಯ ಸಂಚು ರೂಪಿಸಿದ್ದ.

ಪುತ್ರನ ಮದುವೆಯ ನಂತರ ಮನೆಯಿಂದ ಹೊರಬಂದು ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ದಂಪತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಗಳು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದರು.

ದಂಪತಿಯ ಮಗಳು ಶಕುಂತಲಾ ಅವರಿಗೆ ಕರೆ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಭಾನುವಾರ  ಮನೆಗೆ ಹೋದಾಗ ಜೋಡಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.  ಪೊಲೀಸರು ಆರಂಭದಲ್ಲಿ ನರಸಿಂಹನನ್ನು  ಬಂಧಿಸಿದ್ದಾರೆ. ತಪ್ಪೊಪ್ಪಿಗೆಯ ನಂತರ ಇತರ ಮೂವರನ್ನು ಬಂಧಿಸಲಾಯಿತು. ದಂಪತಿಗೆ ಸೂಲಿಬೆಲೆಯಲ್ಲಿ ಎರಡು ಎಕರೆ ಜಮೀನು ಮತ್ತು ಕೆಲವು ನಿವೇಶನಗಳಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ನೇಪಾಳದಿಂದ ಭಾರತದ ವಿವಾದಿತ ಪ್ರದೇಶ ಒಳಗೊಂಡ ನಕ್ಷೆ ಇರುವ ಹೊಸ 100 ರೂ. ನೋಟು ಬಿಡುಗಡೆ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

SCROLL FOR NEXT