ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಿಜೆಪಿ ದಲಿತ, ದಮನಿತ ವರ್ಗಗಳ ವಿರೋಧಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ದಲಿತ ಮತ್ತು ದಮನಿತ ವರ್ಗಗಳ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಬೆಳಗಾವಿ: ಬಿಜೆಪಿ ದಲಿತ ಮತ್ತು ದಮನಿತ ವರ್ಗಗಳ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಮೇಲ್ಮನೆಯಲ್ಲಿ ಗುರುವಾರ ಪೂರಕ ಅಂದಾಜಿನ ಮೇಲಿನ ಚರ್ಚೆ ವೇಳೆ ವಿಪಕ್ಷಗಳಿಗೆ ತಿರುಗೇಟು ನೀಡಿದ ಅವರು, ಶೋಷಿತ ವರ್ಗಗಳ ಬಗ್ಗೆ ಬಿಜೆಪಿಗೆ ನಿಜವಾಗಿಯೂ ಕಾಳಜಿ ಇದ್ದರೆ, ಮಹತ್ವಾ ಕಾಂಕ್ಷಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾಯ್ದೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಜಾರಿಗೊಳಿಸಲು ಕೇಂದ್ರದ ಮೇಲೆ ಒತ್ತಡ ಹಾಕಲಿ ಎಂದು ಸವಾಲು ಹಾಕಿದರು.

ದೇಶದಲ್ಲಿ ತಮಿಳುನಾಡು ಹೊರತುಪಡಿಸಿದರೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ತಂದ ಏಕೈಕ ರಾಜ್ಯ ಕರ್ನಾಟಕ. ಈ ಕಾಯ್ದೆ ತಂದಿದ್ದು 2013ರ ಇದೇ ಬೆಳಗಾವಿ ಅಧಿವೇಶನದಲ್ಲಿ, ಇದೇ ಕಾಂಗ್ರೆಸ್‌ ಮತ್ತು ಇದೇ ಸಿದ್ದರಾಮಯ್ಯ. ಇದರಿಂದ ದಲಿತರ ಅಭಿವೃದ್ಧಿಗೆ ನೀಡುವ ಅನುದಾನ ಪ್ರಮಾಣ ನಾಲ್ಕೂವರೆ ಪಟ್ಟು ಹೆಚ್ಚಳ ಆಗಿದೆ. ಇದು ಅವಕಾಶ ವಂಚಿತ ಸಮುದಾಯಗಳ ಬಗ್ಗೆ ನಮ್ಮ ಬದ್ಧತೆಗೆ ಸಾಕ್ಷಿ. ನಿಮಗೂ (ಬಿಜೆಪಿಗೆ) ಬದ್ಧತೆ ಇದ್ದರೆ, ಉದ್ದೇಶಿತ ಕಾಯ್ದೆ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ನೋಡೋಣ ಎಂದು ಸವಾಲು ಹಾಕಿದರು

ದಲಿತ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಲಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಕಳೆದ 9 ವರ್ಷಗಳಿಂದ ಯಾಕೆ ಮೌನವಾಗಿದೆ? ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ತರುವಂತೆ ಕೇಂದ್ರದ ಮೇಲೆ ಯಾಕೆ ಒತ್ತಡ ಹಾಕುತ್ತಿಲ್ಲ? 2008-2013ರ ವರೆಗೆ ಪ. ಜಾತಿ, ಪಂಗಡಕ್ಕೆ ನೀಡಿದ ಅನುದಾನ 22 ಸಾವಿರ ಕೋಟಿ ರೂ. 2013-2018ರ ವರೆಗೆ ಅದೇ ಸಮುದಾಯಕ್ಕೆ 82 ಸಾವಿರ ಕೋಟಿ ರೂ. ನೀಡಲಾಯಿತು. 2018ರ ಬಳಿಕ ಬಂದ ಸರಕಾರವು ಆ ಅನುದಾನವನ್ನು 30 ಸಾವಿರ ಕೋ. ರೂ.ಗೆ ಇಳಿಸಿದ್ದು ಯಾಕೆ ಎಂದು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT