ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಯುವತಿಯಂತೆ ನಟಿಸಿ ವಿದ್ಯಾರ್ಥಿಗೆ ಲಕ್ಷಾಂತರ ರು. ವಂಚಿಸಿದ್ದ ಯುವಕನ ಬಂಧನ

ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ತುಮಕೂರು: ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ. ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ.

ಭರತ್ ಕುಮಾರ್’ಗೆ ಫೇಸ್ ಬುಕ್’ನಲ್ಲಿ ಪರಿಚಯ ಮಾಡಿಕೊಂಡ ಆರೋಪಿಗಳು ಶರ್ಮಿಳ ಮತ್ತು ದಿವ್ಯ ಎಂಬ ಹೆಸರಿನಲ್ಲಿ ಮೆಸೆಂಜರ್ ಹಾಗೂ ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದಾನೆ. ಬಳಿಕ ಕಷ್ಟ ಇದೆ ಎಂದು ನಂಬಿಸಿ ಹಣವನ್ನು ಫೋನ್ ಪೇ, ಪೇಟಿಎಂ, ಗೂಗಲ್ ಪೇ ಹಾಗೂ ಉಳಿತಾಯ ಖಾತೆಗಳಿಗೆ ಹಾಕಿಸಿಕೊಂಡು ವಂಚಿಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿಯಾಗಿದ್ದು, ಹಣ ಕಳೆದುಕೊಂಡ ಉದ್ಯಮಿ ಆತನ ತಂದೆ ಶಾಂತಕುಮಾರ್ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಡಿಸೆಂಬರ್ 12ರಂದು ಶಿವಮೊಗ್ಗ ನಗರ, ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಟೌನ್ ನಿವಾಸಿ ಸುಜೇಂದ್ರ ಎಂ.ಬಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳ ಬಂಧನಕ್ಕೆ ತನಿಖೆ ಮುಂದುವರಿದಿದೆ.

ವಿಚಾರಣೆ ವೇಳೆ ಆರೋಪಿ ತಾನು ಆನ್‌ಲೈನ್ ಜೂಜಾಟದ ಚಟ ಹೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸಂತ್ರಸ್ತನಿಂದ ಪಡೆದಿದ್ದ ಹಣವನ್ನು ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಸಿಇಎನ್ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ನೇತೃತ್ವದ ತಂಡ ತನಿಖೆ ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT