ಕೋಡಿ ಮಠದ ಸ್ವಾಮೀಜಿ 
ರಾಜ್ಯ

ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕೋಡಿಮಠದ ಶ್ರೀಗೆ ಆಹ್ವಾನ

ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಅಯೋಧ್ಯೆಯ ರಾಮಮಂದಿರ...

ಹಾಸನ: ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಅಯೋಧ್ಯೆಯ ರಾಮಮಂದಿರ ಪ್ರಾಧಿಕಾರ ಆಹ್ವಾನ ನೀಡಿದೆ. 

ಈ ಸಂಬಂಧ ರಾಮಲಲ್ಲಾ ದೇಗುಲದ ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂಪಾಲ್ ರೈ ಅವರು ಕೋಡಿಮಠ ಶ್ರೀಗೆ ಪತ್ರ ಬರೆದಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಅಯೋಧ್ಯಾ ಪಟ್ಟಣಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ. 

ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಶ್ರೀಗಳುನಿರ್ಧರಿಸಿದ್ದಾರೆ ಮತ್ತು 48 ದಿನಗಳ ಕಾಲ ನಡೆಯಲಿರುವ ವಿವಿಧ ಪೂಜೆ ಮತ್ತು ವಿಧಿವಿಧಾನಗಳಲ್ಲಿ ಭಾಗವಹಿಸಲು ಒಂದೆರಡು ದಿನ ಅಯೋಧ್ಯೆಯಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT