ಸಾಂದರ್ಭಿಕ ಚಿತ್ರ 
ರಾಜ್ಯ

ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಮೆಟ್ರೋ ರೈಲು: ಸಂಚಾರ ವ್ಯತ್ಯಯ, ಪ್ರಯಾಣಿಕರ ಪರದಾಟ

ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರು: ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್‌ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಮೆಟ್ರೋ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಟವನ್ನು ಅನುಭವಿಸಿದರು. ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್‌ವರಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ.  ನಾಗಸಂದ್ರದಿಂದ ಯಶವಂತಪುರ ಹಾಗೂ ಯಶವಂತಪುರದಿಂದ ನಾಗಸಂದ್ರದ ಎರಡು ಕಡೆಯಿಂದಲೂ ಮೆಟ್ರೋ ರೈಲು ಸಂಚಾರವಿಲ್ಲ. ಹೀಗಾಗಿ ಮೆಟ್ರೋ ರೈಲಿಗಾಗಿ ಕಾದು ಪ್ರಯಾಣಿಕರು ಸಂಚಾರವಿಲ್ಲದೆ ವಾಪಸ್‌ ಆಗುತ್ತಿದ್ದಾರೆ. ಬೆಳಗ್ಗೆ 10:18ಕ್ಕೆ ರೈಲು ಹಳಿಯಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಗಂಭೀರ ಸಮಸ್ಯೆ ಏನಿಲ್ಲ ಶೀಘ್ರವೇ ಸೇವೆ ಆರಂಭಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT