ಆಸ್ಪತ್ರೆಗೆ ಬಿಜೆಪಿ ನಿಯೋಗ ಭೇಟಿ 
ರಾಜ್ಯ

ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: ಸಂತ್ರಸ್ತೆ ಭೇಟಿಯಾದ ರಾಷ್ಟ್ರ ಬಿಜೆಪಿ ನಿಯೋಗ; ಪ್ರತಿಭಟನೆ ನಂತರ ಎಚ್ಚೆತ್ತ ಸರ್ಕಾರ

ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ  ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ  ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.

ಬಿಜೆಪಿ ಸತ್ಯ ಶೋಧನಾ ತಂಡದಲ್ಲಿ ಸಂಸದರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಇದ್ದಾರೆ. ಸದ್ಯ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಬಳಿಕ ಘಟನಾ ಸ್ಥಳ ವಂಟಮೂರಿ ಹಾಗೂ ಕಾಕತಿ ಪೊಲೀಸ್ ಠಾಣೆಗೆ ಭೇಟಿ ನೀಡಲಿದೆ.

ದಲಿತ ಮಹಿಳೆಯ ಮೇಲಿನ ಅಮಾನವೀಯ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲಾ ಅಂತಾ ಆರೋಪಿಸಿ ಪ್ರತಿಭಟನೆ ನಡೆಸಲಿದೆ. ಪ್ರಕರಣದಲ್ಲಿ ಕೇವಲ ಎಂಟು ಆರೋಪಿಗಳನ್ನು ಬಂಧಿಸಿ ಉಳಿದ ಆರೋಪಿಗಳ ಬಂಧನ ಮಾಡದ ಪೊಲೀಸರ ವಿರುದ್ಧವೂ ಆಕ್ರೋಶ  ವ್ಯಕ್ತವಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕರೆ ಕೊಟ್ಟಿದ್ದಾರೆ. ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಬೆಳಗಾವಿಯಲ್ಲೇ ಮುಖ್ಯಮಂತ್ರಿ ಇದ್ದರೂ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಈ ಎಲ್ಲ ವಿಚಾರಗಳ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ಗೆ ಡ್ಯಾಮೇಜ್ ಮಾಡಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ.

ಬಿಮ್ಸ್ ಆಸ್ಪತ್ರೆಗೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ ಹಿನ್ನೆಲೆ ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ಕೊಡುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸಂಜೆಯೇ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಐವತ್ತು ಸಾವಿರ ರೂ. ಪರಿಹಾರ ಘೋಷಿಸಿದೆ.

ಘಟನೆ ನಡೆದ ಗ್ರಾಮಕ್ಕೆ ನಿನ್ನೆ ಸಂಜೆ ಸ್ಥಳೀಯ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಕುಟುಂಬಸ್ಥರಿಂದ ಮಾಹಿತಿ ಪಡೆದರು. ಇದರ ಬೆನ್ನಲ್ಲೇ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಕಾಕತಿ ಠಾಣೆಯ ಪೊಲೀಸ್ ಇನ್​ಸ್ಪೆಕ್ಟರ್​ ವಿಜಯ್ ಸಿನ್ನೂರ್ ಅವರನ್ನು ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT