ಆರೋಪಿ ಸಭಾ 
ರಾಜ್ಯ

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌: ದಂಪತಿ ಸೇರಿ ನಾಲ್ವರನ್ನು ಬಂಧಿಸಿದ ಆರ್ ಆರ್ ನಗರ ಪೊಲೀಸರು!

ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ಸೆಂಟ್ರಲ್ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ವಿಶೇಷ ವಿಭಾಗವು ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ.

ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ಸೆಂಟ್ರಲ್ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ವಿಶೇಷ ವಿಭಾಗವು ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ.

ತನ್ನ ಪತ್ನಿಯನ್ನು ವಿಧವೆಯಂತೆ ಬಿಂಬಿಸಿದ ಪತಿಯೊಬ್ಬ ಆಕೆಯನ್ನು ಕೈಗಾರಿಕೋದ್ಯಮಿಯೊಂದಿಗೆ ಕಳುಹಿಸಿ ಆತನನ್ನು ಬಲೆಗೆ ಬೀಳಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬಂಧಿತ ವ್ಯಕ್ತಿಗಳನ್ನು ಖಲೀಮ್, ಸಭಾ, ಓಬೇದ್ ರಕೀಮ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ. ಖಲೀಮ್ ಮತ್ತು ಸಭಾ ವಿವಾಹಿತ ದಂಪತಿ ಕೈಗಾರಿಕೋದ್ಯಮಿ ಅತಿಯುಲ್ಲಾ ಅವರನ್ನು ಬಲೆಗೆ ಬೀಳಿಸಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಹನಿಟ್ರ್ಯಾಪ್ ಮಾಡಿ ಹಣ ಪೀಕಲು ಯತ್ನಿಸಿದ್ದು, ಆರೋಪಿ ಖಲೀಮ್ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಅತೀವುಲ್ಲಾ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ್ದಾನೆ.

ಖಲೀಮ್ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಅತೀವುಲ್ಲಾಗೆ ಪರಿಚಯಿಸಿ ಅವಳನ್ನು ನೋಡಿಕೊಳ್ಳುವಂತೆ ಕೇಳಿಕೊಂಡಿದ್ದಾನೆ. ಶೀಘ್ರದಲ್ಲೇ, ಅತೀವುಲ್ಲಾ ಮತ್ತು ಸಭಾ ದೈಹಿಕ ಸಂಬಂಧ ಬೆಳೆಸಿಕೊಂಡರು.

ಆರ್‌ಆರ್ ನಗರ ಪ್ರದೇಶದಲ್ಲಿ ಹೋಟೆಲ್ ರೂಂ ಬುಕ್ ಮಾಡಲು ಆಧಾರ್ ಕಾರ್ಡ್‌ನೊಂದಿಗೆ ತನ್ನೊಂದಿಗೆ ಬರುವಂತೆ ಹೇಳಿದ್ದಾಳೆ. ಅತಿವುಲ್ಲಾ ಹೋಟೆಲ್ ಕೋಣೆಗೆ ಪ್ರವೇಶಿಸಿದಾಗ, ಆರೋಪಿಗಳು ಒಳನುಗ್ಗಿ ಈ ಸಂಬಂಧವನ್ನು ಕುಟುಂಬದಿಂದ ಗೌಪ್ಯವಾಗಿಡಲು 6 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್‌ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT