ರಾಜ್ಯ

ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ನಾಳೆ ಯತೀಂದ್ರಗೆ ಟಿಪ್ಪು ಹೆಸರಿಟ್ಟರೂ ಅಚ್ಚರಿ ಇಲ್ಲ!

Shilpa D

ಬೆಂಗಳೂರು: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ  ಸಾಹೇಬರು ನಾಳೆ ಯತೀಂದ್ರ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಟಾಂಗ್ ನೀಡಿದೆ.

ಕಾಂಗ್ರೆಸ್‌ ಕೆಲ ಶಾಸಕರು ಟಿಪ್ಪು ಜಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ ಸರ್ಕಾರಕ್ಕೆ ಬಿಜೆಪಿ ಟಾಂಗ್‌ ನೀಡಿದೆ.   ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು:

ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ, ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ, ಮೈಸೂರು ವಿವಿಗೆ ಟಿಪ್ಪು ಹೆಸರು
ಟಿಪ್ಪುವಿನ 108 ಅಡಿ ಪ್ರತಿಮೆ, ಟಿಪ್ಪು ಮದ್ಯದ ಬಾಟಲಿ, ಬಿಎಂಟಿಸಿ/ಕೆಎಸ್‌ಆರ್‌ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು ಇಡಲಿದೆ ಕಮ್ಯೂನಲ್ ಕಾಂಗ್ರೆಸ್ ಎಂದು ಬಿಜೆಪಿ ಲೇವಡಿ ಮಾಡಿದೆ.

SCROLL FOR NEXT