ಸಂಗ್ರಹ ಚಿತ್ರ 
ರಾಜ್ಯ

ಸದನದಲ್ಲಿ ಮರಾಠಿ ಮಾತನಾಡಿದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್: ಕನ್ನಡದ ಪಾಠ ಮಾಡಿದ ಸ್ಪೀಕರ್‌ ಖಾದರ್

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದ್ದು, ಇದು ಶುಕ್ರವಾರ ಸದನದಲ್ಲಿ ಕೆಲಕಾಲ ಗದ್ದಲ ಸೃಷ್ಟಿಸಿತ್ತು.

ಬೆಳಗಾವಿ: ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದ್ದು, ಇದು ಶುಕ್ರವಾರ ಸದನದಲ್ಲಿ ಕೆಲಕಾಲ ಗದ್ದಲ ಸೃಷ್ಟಿಸಿತ್ತು.

ಶುಕ್ರವಾರ ವಿಧಾನಸಭೆಯಲ್ಲಿ ಮಾತನಾಡಿದ ವಿಠ್ಠಲ ಹಲಗೇಕರ್, ಖಾನಾಪುರ ತಾಲೂಕಿನಲ್ಲಿರುವ ಅಂಗನವಾಡಿಗಳಿಗೆ ಮರಾಠಿ ಭಾಷಿಕ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಮರಾಠಿಯಲ್ಲಿ ಹೇಳಿದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಲಕ್ಷ್ಮಣ ಸವದಿ, ‘ಯಾವ ಭಾಷೆಯ ಕುರಿತು ಇಲ್ಲಿ ಗಲಾಟೆಗಳು ನಡೆಯುತ್ತಿವೆಯೋ, ನೀವು ಅದೇ ಭಾಷೆಯನ್ನು ವಿಧಾನಸಭೆಯಲ್ಲಿ ಬಳಸಲು ಅವಕಾಶ ನೀಡಬೇಡಿ’ ಎಂದರು.

‘ಅವರಿಗೆ ಕನ್ನಡ ಚೆನ್ನಾಗಿ ಬರುತ್ತದೆ. ನಮ್ಮ ಬಳಿ ಕನ್ನಡದಲ್ಲೆ ಅವರು ಮಾತನಾಡುತ್ತಾರೆ. ಕನ್ನಡ ಮಾತನಾಡಲು ಸಾಧ್ಯವಾಗದಿದ್ದರೆ ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಲಿ ಎಂದು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಖಾದರ್ ಅವರು, ನಿಮಗೆ ಬರುವ ಭಾಷೆಯಲ್ಲಿ ಮಾತನಾಡಿ ಎಂದು ಹೇಳಿದರು.

ಬಳಿಕ ಹಲಗೇಕರ್ ಅವರು, ಅರ್ಧ ಕನ್ನಡ ಅರ್ಧ ಮರಾಠಿಯಲ್ಲಿ ಮಾತನಾಡಲಾರಂಭಿಸುತ್ತಾರೆ. ಆಗ ಶಾಸಕ ಲಕ್ಷ್ಮಣ ಸವದಿ ಅವರು ಆಕ್ಷೇಪ ವ್ಯಕ್ತಪಡಿಸಿ, ಅವರಿಗೆ ಕನ್ನಡ ಮಾತನಾಡಲು ಬರುತ್ತದೆ. ನನ್ನೊಂದಿಗೆ ಕನ್ನಡದಲ್ಲೇ ಮಾತನಾಡುತ್ತಾರೆ ಎಂದರು. ಆಗ ಸ್ಪೀಕರ್ ಮಧ್ಯಪ್ರವೇಶಿಸಿ ಅವರಿಗೆ ಸರಿಯೆನಿಸುವ ಭಾಷೆಯಲ್ಲಿ ಮಾತಾಡಲಿ ಬಿಡಿ, ನೀವು ಹಿರಿಯ ಶಾಸಕರಾಗಿ ಹೀಗೆ ಅಡ್ಡಿ ಪಡಿಸಬಾರದು ಎಂದರು.

ಕನ್ನಡ ಭಾಷೆ ಬೆಳೆಯಬೇಕಾದರೆ, ಬೇರೆ ಭಾಷೆಯನ್ನು ದ್ವೇಷಿಸಬೇಡಿ, ಭಾಷೆಯಲ್ಲಿ ರಾಜಕಾರಣ ಮಾಡಬೇಡಿ ಎಂದು ಸಲಹೆ ನೀಡಿದರು.

ಆಗ ವಿಠಲ್ ಅವರು ಸವದಿ ಅವರು ನನ್ನ ಜೊತೆ ಮರಾಠಿಯಲ್ಲೇ ಮಾತನಾಡುತ್ತಾರೆ ಎಂದರು. ಕೊನೆಗೆ ಕನ್ನಡದಲ್ಲೇ ಮಾತು ಮುಂದುವರಿಸಿದ ಶಾಸಕ ವಿಠಲ ಹಲಗೇಕರ್ ಸರಿಯಾಗಿ ಅರ್ಥವಾಗದ ರೀತಿ ವಿಷಯಮಂಡನೆ ಮಾಡಿದರು.

ಖಾನಾಪುರ ಕ್ಷೇತ್ರದಲ್ಲಿ ಕನ್ನಡ ಶಿಕ್ಷಕರನ್ನು ಹಾಕಬೇಕು. ಅಂಗನವಾಡಿ, ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು. ನಂತರ ಸ್ಪೀಕರ್ ಯು.ಟಿ.ಖಾದರ್ ಅವರು, ನೀವು ಮುಂದಿನ ಅಧಿವೇಶನದ ವೇಳೆಗೆ ಕನ್ನಡ ಕಲಿತು ಬಂದು ವಿಷಯವನ್ನು ಚೆನ್ನಾಗಿ ಮಾತನಾಡಿ ಎಂದು ಶಾಸಕರಿಗೆ ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT