ವಿಧಾನಸಭೆಯಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನದ ಕೊನೆಯ ದಿನ ಶಾಸಕರ ಚರ್ಚೆ 
ರಾಜ್ಯ

ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ.ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಯಿತು.

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ. ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಯಿತು ಮತ್ತು 150 ಗಮನ ಸೆಳೆಯುವ ಪ್ರಸ್ತಾಪಗಳನ್ನು ಮಂಡಿಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ತಿಳಿಸಿದರು. 

ನಿನ್ನೆ ಶುಕ್ರವಾರ ಅಧಿವೇಶನ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸ್ಪೀಕರ್ ಖಾದರ್, ಅಧಿವೇಶನ ಸುಗಮವಾಗಿ ನಡೆಯಿತು. 10 ದಿನಗಳ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಕುರಿತು ಹಲವಾರು ಚರ್ಚೆಗಳು ನಡೆದವು. ಉತ್ತರ ಕರ್ನಾಟಕ ಮತ್ತು ಬರ ಸೇರಿದಂತೆ ಹೆಚ್ಚಿನ ಚರ್ಚೆಗಳಲ್ಲಿ ಕನಿಷ್ಠ ಶೇಕಡಾ 80ರಷ್ಟು ಶಾಸಕರು ಭಾಗವಹಿಸಿದರು ಎಂದರು. 

ಹಲವು ವಿಧೇಯಕಗಳು ಅಂಗೀಕಾರಗೊಂಡಿದ್ದು, ಎರಡು ಪ್ರಮುಖವಾದವು ಬೆಳಗಾವಿ, ಹುಬ್ಬಳ್ಳಿ, ವಿಜಯಪುರ ಮತ್ತು ಶಿವಮೊಗ್ಗದ ವಿಮಾನ ನಿಲ್ದಾಣಗಳಿಗೆ ನಾಮಕರಣ ಮತ್ತು ಇನ್ನೊಂದು ವಕೀಲರ ರಕ್ಷಣೆಗಾಗಿ ಎಂದು ಅವರು ಹೇಳಿದರು. ವಿಧಾನಮಂಡಲದ ಅಧಿವೇಶನ ಹೊರತುಪಡಿಸಿ ವರ್ಷದ ಬಹುತೇಕ ಭಾಗ ಖಾಲಿ ಇರುವ ಸುವರ್ಣ ವಿಧಾನಸೌಧವನ್ನು ಸದುಪಯೋಗಪಡಿಸಿಕೊಂಡು ವಿವಿಧ ಸೌಲಭ್ಯಗಳನ್ನು ಕಲ್ಪಿಸಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದರು.

ಸುವರ್ಣ ಸೌಧದಲ್ಲಿ ವಾರಾಂತ್ಯದಲ್ಲಿ ಪ್ರವಾಸಿಗರಿಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಬೆಂಗಳೂರಿನ ವಿಧಾನಸೌಧವನ್ನು ಹೋಲುವ ಭವ್ಯವಾದ ರಚನೆಯು ವಾರಾಂತ್ಯದಲ್ಲಿ ಪ್ರಕಾಶಿಸಲ್ಪಡುತ್ತದೆ ಎಂದು ಅವರು ಹೇಳಿದರು. ಸುವರ್ಣಸೌಧದಲ್ಲಿ ಶಾಸಕರ ಭವನ ನಿರ್ಮಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದರು. 

ಇಂತಹ ದೊಡ್ಡ ಕಟ್ಟಡವನ್ನು ನಿರ್ವಹಿಸುವುದು ಕಷ್ಟಸಾಧ್ಯವಾದ ಕಾರಣ ನಾವು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಅಥವಾ ಆದಾಯ-ಹಂಚಿಕೆ ಮಾದರಿಯಲ್ಲಿ ವರ್ಷವಿಡೀ ಬಳಸಿಕೊಳ್ಳಲಾಗುವುದು ಎಂದರು. ಕಳೆದ 10 ದಿನಗಳಲ್ಲಿ 27,000 ವಿದ್ಯಾರ್ಥಿಗಳು ಮತ್ತು 14,500 ಸಾರ್ವಜನಿಕರು ಬೆಳಗಾವಿ ಸುವರ್ಣ ಸೌಧಕ್ಕೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT