ರಾಣಿ ಅಬ್ಬಕ್ಕ ದೇವಿಯ ಭಾವಚಿತ್ರವಿರುವ ಅಂಚೆಚೀಟಿ ಬಿಡುಗಡೆ 
ರಾಜ್ಯ

ಕರಾವಳಿಯಲ್ಲಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆ: ನಿರ್ಮಲಾ ಸೀತಾರಾಮನ್

2024 ರ ಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮೂಡಬಿದಿರೆ(ದಕ್ಷಿಣ ಕನ್ನಡ): 2024 ರ ಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅವರು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ರಾಣಿ ಅಬ್ಬಕ್ಕ ದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ನಂಬಿರುವುದರಿಂದ ಮಹಿಳಾ ಮಸೂದೆ ಸಾಕಾರಗೊಂಡಿದೆ ಎಂದರು.

ಪೋರ್ಚುಗೀಸರ ವಿರುದ್ಧ ಹೋರಾಡಿದ 16 ನೇ ಶತಮಾನದ ಉಳ್ಳಾಲದ ರಾಣಿ ಅಬ್ಬಕ್ಕ ಅವರ ಧೈರ್ಯ ಮತ್ತು ವೀರಾವೇಶವನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್, ಸಾಮ್ರಾಜ್ಯಶಾಹಿ ಶಕ್ತಿಗಳ ವಿರುದ್ಧ ಹೋರಾಡಿದ ಅನೇಕ ಅಜ್ಞಾತ ಹೋರಾಟಗಾರರ ಕೊಡುಗೆಗಳನ್ನು ದಾಖಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ, ಸರ್ಕಾರವು 14,500 ಕಥೆಗಳೊಂದಿಗೆ ಡಿಜಿಟಲ್ ಜಿಲ್ಲಾ ಭಂಡಾರವನ್ನು ಸಂಗ್ರಹಿಸಿದೆ, ಇದು ಸ್ವಾತಂತ್ರ್ಯ ಹೋರಾಟದೊಂದಿಗೆ ಸಂಬಂಧಿಸಿದ ಸ್ಥಳಗಳನ್ನು ಎತ್ತಿ ತೋರಿಸುತ್ತದೆ ಎಂದರು. 

ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ, ಸಂವಿಧಾನ ಸಭೆಯಲ್ಲಿ ಮಹಿಳೆಯರು ಮತ್ತು ಸ್ವಾತಂತ್ರ್ಯ ಹೋರಾಟದ ಬುಡಕಟ್ಟು ನಾಯಕರ ಮೂರು ಪುಸ್ತಕಗಳನ್ನು ಹೊರತರಲು ಕೇಂದ್ರ ಸಂಸ್ಕೃತಿ ಸಚಿವಾಲಯವು ಅಮರ ಚಿತ್ರ ಕಥಾದೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಕರಾವಳಿ ಕರ್ನಾಟಕದಲ್ಲಿ ರಾಣಿ ಅಬ್ಬಕ್ಕನ ಹೆಸರಿನಲ್ಲಿ ಸೈನಿಕ ತೆರೆಯುವ ಭರವಸೆಯನ್ನು ವಿತ್ತ ಸಚಿವೆ ಈ ಸಂದರ್ಭದಲ್ಲಿ ನೀಡಿದರು. ಅಂಚೆ ಚೀಟಿಗೆ ಪ್ರಯುಕ್ತ ರಾಣಿ ಅಬ್ಬಕ್ಕನ ಭಾವಚಿತ್ರಕ್ಕೆ ಕಲಾವಿದ ವಾಸುದೇವ್ ಕಾಮತ್ ಅವರನ್ನು ಅಭಿನಂದಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT