ಪ್ರತಾಪ್ ಸಿಂಹ 
ರಾಜ್ಯ

ಸಂಸತ್ ಭದ್ರತಾ ಲೋಪ: ಪೊಲೀಸರಿಂದ ಪ್ರತಾಪ್ ಸಿಂಹ ಹೇಳಿಕೆ ದಾಖಲು ಸಾಧ್ಯತೆ

ಸಂಸತ್ ಮೇಲೆ ಹೊಗೆ ಬಾಬ್ ದಾಳಿ ನಡೆಸಿದ ಇಬ್ಬರಿಗೆ ಸಂಸತ್ ಪ್ರವೇಶದ ಪಾಸು ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ ಪಡೆಯುವ ಸಾಧ್ಯತೆ ಇದೆ.

ನವದೆಹಲಿ/ಮೈಸೂರು: ಸಂಸತ್ ಮೇಲೆ ಹೊಗೆ ಬಾಬ್ ದಾಳಿ ನಡೆಸಿದ ಇಬ್ಬರಿಗೆ ಸಂಸತ್ ಪ್ರವೇಶದ ಪಾಸು ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ ಪಡೆಯುವ ಸಾಧ್ಯತೆ ಇದೆ.

ಪ್ರತಾಪ್ ಸಿಂಹ ಅವರು ಲಖನೌನ ಸಾಗರ್ ಶರ್ಮಾ ಮತ್ತು ಮೈಸೂರಿನ ಡಿ.ಮನೋರಂಜನ್ ಅವರಿಗೆ ಡಿ.13ರಂದು ಲೋಕಸಭೆ ಕಲಾಪ ವೀಕ್ಷಣೆಯ ಪಾಸು ನೀಡಿದ್ದರು. ಈ ಇಬ್ಬರೂ ಸಂಸತ್ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿ ಗದ್ದಲ ಎಬ್ಬಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಹೇಳಿಕೆ ಪಡೆಯಲು ವಿಶೇಷ ಸೆಲ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಪಾಸ್ ಗಾಗಿ ಮನೋರಂಜನ್ ಕಳೆದ ಮೂರು ತಿಂಗಳಿನಿಂದ ಪ್ರತಾಪ್ ಸಿಂಹ ಅವರ ಕಚೇರಿಗೆ ಭೇಟಿ ನೀಡಿ ಹಲವು ಬಾರಿ ಮನವಿ ಮಾಡಿದ್ದ. ಮೈಸೂರಿನ ನಿವಾಸಿ ಎಂದು ಹೇಳಿ ಪಾಸ್ ಪಡೆದುಕೊಂಡಿದ್ದ. ಸಾಮಾನ್ಯವಾಗಿ ಮೈಸೂರಿನವರು ಎಂದರೆ ಪ್ರತಾಪ್ ಸಿಂಹ ಅವರ ಮನವಿಗೆ ಸ್ಪಂದಿಸುವುದು ಹೆಚ್ಚು ಎಂದು ಮೂಲಗಳು ಮಾಹಿತಿ ನೀಡಿವೆ.

ಈ ನಡುವೆ ಪ್ರತಾಪ್ ಸಿಂಹ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನ ಒಳಗೆ ಹಾಗೂ ಹೊರಗೆ ಪ್ರತಿಭಟನನೆಗಳನ್ನು ನಡೆಸುತ್ತಿದ್ದರೂ, ಪ್ರತಾಪ್ ಸಿಂಹ ಅವರು ಇದೂವರೆಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಆದರೆ, ಘಟನೆ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದರು.

ಘಟನೆ ಬಳಿಕ ಸಂಸತ್ತಿನ ಭದ್ರತೆಯನ್ನು ಪರಿಶೀಲಿಸಲು ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ಖಚಿತಪಡಿಸಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲು 'ಉನ್ನತ ಸಮಿತಿ'ಯನ್ನು ರಚಿಸಿದ್ದೇನೆ ಎಂದು ಬಿರ್ಲಾ ಶನಿವಾರ ಎಲ್ಲಾ ಸಂಸದರಿಗೆ ಪತ್ರ ಬರೆದಿದ್ದಾರೆ.

ಏತನ್ಮಧ್ಯೆ, ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಅವರನ್ನು ಶನಿವಾರ ಬಂಧಿಸಲಾಗಿದ್ದು,  ನಂತರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯ ಆರೋಪಿಯನ್ನು ಏಳು ದಿನಗಳ ಕಾಲಪೊಲೀಸ್ ಕಸ್ಟಡಿಗೆ ನೀಡಿದೆ.

ಘಟನೆಯ ದಿನದಂದು ಮಹೇಶ್ ಮಾಸ್ಟರ್ ಮೈಂಡ್ ಲಲಿತ್ ಝಾ ಮತ್ತು ಕೈಲಾಶ್ ಎಂಬ ಆರೋಪಿಗಳೊಂದಿಗೆ ಸಂಸತ್ತಿನ ಹೊರಗಿದ್ದ. ಘಟನೆಯ ನಂತರ, ಮಹೇಶ್ ಮತ್ತು ಲಲಿತ್ ಝಾ ಇಬ್ಬರೂ ರಾಜಸ್ಥಾನಕ್ಕೆ ಪಲಾಯನ ಮಾಡಿದ್ದರು. ನಂತರ ಮಹೇಶ್ ಹೆಸರಿನಲ್ಲಿ ಹೋಟೆಲ್‌ ರೂಮ್ ಬುಕ್ ಮಾಡಿಕೊಂಡು ಅಲ್ಲಿಯೇ ತಂಗಿದ್ದರು. ಬಳಿಕ ರಾಜಸ್ಥಾನದಲ್ಲಿ ಮೊಬೈಲ್ ಫೋನ್ ನಾಶಪಡಿಸಲು ಮಹೇಶ್ ಝಾಗೆ ಮಹೇಶ್ ಸಹಾಯ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಇದರ ಬೆನ್ನಲ್ಲೇ ಮಹೇಶ್ ವಿರುದ್ಧ ಕ್ರಿಮಿನಲ್ ಸಂಚು ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಸೆಲ್ ಪೂರ್ವಾನುಮತಿ ಇಲ್ಲದೆ ನಗರವನ್ನು ತೊರೆಯದಂತೆ ಮನೋರಂಜನ್ ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿದೆ.

ಈ ನಡುವೆ ಘಟನೆ ವೇಳೆ ಆರೋಪಿಗಳು ಬಳಸಿದ್ದ ಶೂ ಹಾಗೂ ಬಣ್ಣದ ಹೊಗೆ ಡಬ್ಬಿಗಳ ಪತ್ತೆ ಮಾಡಲು ದೆಹಲಿ ಪೊಲೀಸರು ಲಖನೌ ಹಾಗೂ ಲಾತೂರ್ ಗೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT