ಮಲದ ಗುಂಡಿಯೊಳಗೆ ಮಕ್ಕಳನ್ನು ಇಳಿಸಿ ಸ್ವಚ್ಛತಾ ಕಾರ್ಯ 
ರಾಜ್ಯ

ಕೋಲಾರ: ಮಲದ ಗುಂಡಿಯೊಳಗೆ ಮಕ್ಕಳನ್ನು ಇಳಿಸಿ ಸ್ವಚ್ಛತಾ ಕಾರ್ಯ: ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ್ ಹಾಗೂ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜ ಕಲ್ಯಾಣ ಸಚಿವ ಡಾ‌.ಎಚ್.ಸಿ.ಮಹದೇವಪ್ಪ, 'ಇದೊಂದು ತೀರಾ ಗಂಭೀರವಾದ ವಿಚಾರ. ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ದೊಡ್ಡ ಲೋಪ ಎಸಗಿದ್ದಾರೆ. ಹೀಗಾಗಿ, ಅಮಾನತುಗೊಳಿಸಿ ತನಿಖೆ ನಡೆಸಲು ನಿರ್ದೇಶನ ನೀಡಿದ್ದೇನೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗೆ ಜಿಲ್ಲಾ ನ್ಯಾಯಾಧೀಶರಾದ ಸುನೀಲ್‌ ಹೊಸಮಣಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಮಕ್ಕಳ ಬಳಿಯೂ ಸಮಸ್ಯೆಯನ್ನು ವಿಚಾರಿಸಿದ್ದಾರೆ. ಪ್ರತಿ ಕೊಠಡಿಗೂ ಭೇಟಿ ಕೊಟ್ಟು ಪರಿಶೀಲನೆ ‌ನಡೆಸಿದ ನ್ಯಾಯಾಧೀಶರು ಮಕ್ಕಳಿಂದ ದೂರು ಪಡೆದುಕೊಂಡರು.

ಈ ವೇಳೆ ಮಕ್ಕಳು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ವಾರ್ಡನ್ ಮಂಜುನಾಥ್ ಹಾಗೂ ಶಿಕ್ಷಕ ಅಭಿಷೇಕ್ ಅವರಿಂದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?