ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಗಹಲ್ಲೆ ನಡೆಸಿದ್ದರು. ಡಿ.10ರ ಮಧ್ಯರಾತ್ರಿ ನಡೆದಿದ್ದ ಈ ಅಮಾನವೀಯ ಘಟನೆಗೆ ರಾಜ್ಯ ಸರ್ಕಾರ ಮಾತ್ರವಲ್ಲದೆ ಇಡೀ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು 11 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಪ್ರತಿಪಕ್ಷ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ಕಿಡಿಕಾರಿದೆ. ಕೇಂದ್ರ ಮಹಿಳಾ ಆಯೋಗ, ಎಸ್ಟಿ ರಾಷ್ಟ್ರೀಯ ನಿಯೋಗ ಹಾಗೂ ಬಿಜೆಪಿ ಸತ್ಯಶೋಧನಾ ಸಮಿತಿ ಕೂಡ ಭಾನುವಾರ ಬೆಳಗಾವಿಗೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದೆ. ಈ ಮಧ್ಯೆ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ಅಧಇಕಾರಿಗಳಿಗೆ ಕಡತಗಳನ್ನು ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ. ಸಿಐಡಿ ಡಿಐಡಿ ಸುನೀಲ್ ಕುಮಾರ್ ಮೀನಾ ಶೀಘ್ರದಲ್ಲೇ ಬೆಳಗಾವಿಗೆ ಭೇಟಿ ನೀಡಲಿದ್ದು, ಈಗಾಗಲೇ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಸಂಪೂರ್ಣ ವಿವರ ಪಡೆದಿದ್ದಾರೆ.

ಬೆಳಗಾವಿಯ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳನ್ನು ಪಟ್ಟಿಮಾಡಿದ್ದಾರೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!