ಶಾಲಾ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛತೆ ಕಾರ್ಯ 
ರಾಜ್ಯ

ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ

ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ  ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ  ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಈ ಸಮಿತಿಯಲ್ಲಿದ್ದಾರೆ.

ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಾಂಶಗಳನ್ನು ಪರಿಶೀಲಿಸಿ ರಾಜ್ಯಾಧ್ಯಕ್ಷರಿಗೆ ಸಮಿತಿ ವರದಿ ನೀಡಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel