ಶಾಲಾ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛತೆ ಕಾರ್ಯ 
ರಾಜ್ಯ

ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ

ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ  ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ  ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಈ ಸಮಿತಿಯಲ್ಲಿದ್ದಾರೆ.

ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಾಂಶಗಳನ್ನು ಪರಿಶೀಲಿಸಿ ರಾಜ್ಯಾಧ್ಯಕ್ಷರಿಗೆ ಸಮಿತಿ ವರದಿ ನೀಡಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT