ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಉಪತಳಿ JN.1 ಭೀತಿ: ನಾಳೆ ತಾಂತ್ರಿಕ ಸಲಹಾ ಸಮತಿ ಸಭೆ; ಕ್ರಿಸ್'ಮಸ್, ಹೊಸವರ್ಷ ಸಂಭ್ರಮಕ್ಕೆ ಬ್ರೇಕ್ ಸಾಧ್ಯತೆ

ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ

ಬೆಂಗಳೂರು: ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಸೇರುತ್ತಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಮೂಡಿದೆ.

ಹೊಸ ವರ್ಷ ಮತ್ತು ಕ್ರಿಸ್‌ಮಸ್ ಹಬ್ಬ ನೋಡಿಕೊಂಡು ಕೊರೊನಾ ಜಾಗೃತಿಗಾಗಿ ಹೊಸ ನಿಯಮ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆಯು ಹೊಸ ರೂಪಾಂತರವು ಪ್ರತಿರಕ್ಷಣಾ ವ್ಯವಸ್ಥೆಗಳನ್ನು ತಪ್ಪಿಸುವಲ್ಲಿ ಉತ್ತಮವಾಗಿದೆ ಎಂಬುದನ್ನು ಸೂಚಿಸುತ್ತದೆ ”ಎಂದು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸದಸ್ಯರೊಬ್ಬರು ಹೇಳಿದ್ದಾರೆ.

ಸೋಂಕು ಏರಿಕೆ ಕುರಿತು ಭಯಭೀತರಾಗುವ ಅಗತ್ಯವಿಲ್ಲ. ಜನರು ಮಾಸ್ಕ್ ಧರಿಸುವುದು, ಜನದಟ್ಟಣೆ ಇರುವ ಪ್ರದೇಶದಿಂದ ದೂರ ಇರುವುದು ಹಾಗೂ ಕೋವಿಡ್ ಸೂಕ್ತ ನಡವಳಿಕೆಯ್ನು ಅನುಸರಿಸುವುದರಿಂದ ಸೋಂಕಿನಿಂದ ದೂರ ಉಳಿಯಬಹುದು. ಹೊಸ ವರ್ಷ ಸಂಭ್ರಮ ವೇಳೆ ಹೆಚ್ಚೆಚ್ಚು ಜನರು ಸೇರುವುದರಿಂದ ಇದಕ್ಕೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಆಕ್ಟೀವ್ ಕೇಸ್‌ಗಳ ಸಂಖ್ಯೆ 1,300 ಗಡಿ ದಾಟಿದೆ. ಒಂದು ಕಡೆ ಕೇರಳದಲ್ಲೂ ಪ್ರತಿನಿತ್ಯ 300ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿಯೇ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT