ಕರ್ನಾಟಕ ಹೈಕೋರ್ಟ್ 
ರಾಜ್ಯ

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್‌ಗೆ ಸರ್ಕಾರದ ವರದಿ

ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಕೈಗಾರಿಕೆಗಳ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಶಿಫ್ಟ್‌ಗಳಲ್ಲಿ ಕಾರ್ಮಿಕರು ಕೆಲಸ ಮಾಡುವುದರಿಂದ ದಟ್ಟಣೆಗೆ ಕಾರಣವಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಹೀಗಾಗಿ ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ಣದೀಕ್ಷಿತ್‌ರಿದ್ದ ಪೀಠದ ಮುಂದೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದ್ದು ಜನವರಿ ಮೊದಲ ವಾರಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. 

ಸಮರ್ಪಣ ಸಾಂಸ್ಕೃತಿಕ ಸೇವಾ ಸಂಸ್ಥೆ ಪಿಐಎಲ್ ಸಲ್ಲಿಸಿತ್ತು. ಇನ್ನು ಸಮಯ ಬದಲಾವಣೆಗೆ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಪೋಷಕರಿಂದಲೂ ವಿರೋಧ ವ್ಯಕ್ತವಾಗಿತ್ತು. ಪರ್ಯಾಯ ಮಾರ್ಗದ ಕುರಿತು ಕೆಲ ಖಾಸಗಿ ಸಂಘಟನೆ ಸಲಹೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT