643 ಸಂಚಾರ ನಿಯಮ ಉಲ್ಲಂಘಿಸಿದ ಸ್ಕೂಟಿ 
ರಾಜ್ಯ

643 ಸಂಚಾರ ನಿಯಮ ಉಲ್ಲಂಘನೆ: ಸ್ಕೂಟಿ ಮೇಲೆ 3.22 ಲಕ್ಷ ರೂ ದಂಡ, ಸವಾರನಿಗಾಗಿ ಶೋಧ, ಇಂದು ಮತ್ತೆ 4 ಕೇಸ್

643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ.

ಬೆಂಗಳೂರು: 643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ.

ಹೌದು.. ಸ್ಕೂಟಿ ಪೆಪ್ ದ್ವಿಚಕ್ರವಾಹನವೊಂದು ಬರೊಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ ಸೇರಿದಂತೆ ಒಟ್ಟು 643 ಬಾರಿ ನಿಯಮಗಳ ಉಲ್ಲಂಘನೆ ಆಗಿದೆ. ಈ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. 

ಮಾಲಾ ಎಂಬುವರಿಗೆ ಸೇರಿದ ಸ್ಕೂಟಿ ಇದಾಗಿದೆ. ಈ ಸ್ಕೂಟಿ ಮೂಲಕ ಬರೋಬ್ಬರಿ 643 ಬಾರಿ ಸಂಚಾರ ನಿಯಮಗಳ ಉಲ್ಲಂಘಿಸಲಾಗಿದೆ. ಟ್ರಾಫಿಕ್ ನಿಯಮ ಪಾಲಿಸದ ಸ್ಕೂಟಿ ಮೇಲೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸ್ಕೂಟಿ ನಂಬರ್ KA 04, KF 9072 ಎಂದಾಗಿದೆ. ಬೆಂಗಳೂರಿನ ಆರ್‌ಟಿ ನಗರ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಟೂಟಿ ಮಾಲೀಕರು ಮತ್ತು ಸವಾರನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. 

ಸ್ಕೂಟಿ ಬೆಲೆ 30 ಸಾವಿರ, ದಂಡ 3.22 ಲಕ್ಷ ರೂ
ಈ ಬಳಕೆ ಮಾಡಿದ ಸ್ಕೂಟಿಯ ಮಾರುಕಟ್ಟೆ ಅಂದಾಜು ಬೆಲೆ 20,000 ರಿಂದ 30,000 ರೂಪಾಯಿಗಳ ನಡುವೆ ಅಂದಾಜು ಮಾಡಲಾಗಿದೆ. ಪ್ರಸ್ತುತ, ಸಮಸ್ಯೆಯನ್ನು ಪರಿಹರಿಸಲು ಮತ್ತು ತಪ್ಪಿತಸ್ಥ ಸವಾರನನ್ನು ನ್ಯಾಯಕ್ಕೆ ತರಲು ಪೊಲೀಸರು ಸ್ಕೂಟಿಗಾಗಿ ಸಕ್ರಿಯವಾಗಿ ಹುಡುಕುತ್ತಿದ್ದಾರೆ. 

ಸುದ್ದಿ ಹರಡುತ್ತಿದ್ದಂತೆ, ಟ್ರಾಫಿಕ್ ಕ್ಯಾಮೆರಾಗಳ ಕಾವಲು ಕಣ್ಣುಗಳನ್ನು ಕಡಿಮೆ ಅಂದಾಜು ಮಾಡಿ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಸವಾರರಲ್ಲಿ ಜಾಗೃತಿಯ ಪ್ರಜ್ಞೆ ಹೆಚ್ಚುತ್ತಿದೆ. ನಿರಂತರವಾಗಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವವರಿಗೆ ಗಮನಾರ್ಹವಾದ ದಂಡ ಕಾಯುತ್ತಿರುತ್ತದೆ ಎಂಬುದಕ್ಕೆ ಈ ಪ್ರಕರಣ ಸ್ಪಶ್ಟ ಉದಾಹರಣೆಯಾಗಿದೆ.

ಮತ್ತೆ 4 ಸಂಚಾರ ನಿಯಮ ಉಲ್ಲಂಘನೆ, ಮತ್ತೆ 2 ಸಾವಿರ ರೂ ದಂಡ
ಈ ಸುದ್ದಿ ವ್ಯಾಪಕ ವೈರಲ್ ಆಗುತ್ತಿದೆಯಾದರೂ ಅತ್ತ ಸ್ಕೂಟಿ ಸವಾರ ಮಾತ್ರ ಇದಾವುದರ ಪರಿವೇ ಇಲ್ಲದೇ ತನ್ನ ಸಂಚಾರ ನಿಯಮ ಉಲ್ಲಂಘನೆ ಚಾಳಿ ಮುಂದುವರೆಸಿದ್ದು ಇಂದೂ ಸಹ ನಾಲ್ಕು ಬಾರಿ ಹೆಲ್ಮೆಟ್ ರಹಿತ ಪ್ರಯಾಣ ಮಾಡಿರುವ ಕುರಿತು ಚಲನ್ ದಾಖಲಿಸಲಾಗಿದೆ. ಆ ಮೂಲಕ ಮತ್ತೆ 2 ಸಾವಿರ ರೂ ದಂಡ ಹೆಚ್ಚಿಸಿಕೊಂಡಿದ್ದು, ಈ ಮೂಲಕ ಆತ ಒಟ್ಟು 3.24 ಲಕ್ಷ ರೂ ದಂಡ ಪಾವತಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT