ಗುಂಡೇಟಿಗೆ ಬಲಿಯಾದ ಕಾಡುಹಂದಿ 
ರಾಜ್ಯ

ಹಾಸನ: ಕಾಡು ಹಂದಿ ದಾಳಿಯಿಂದ ರೈತ ಸಾವು, ಇಬ್ಬರು ಮಹಿಳೆಯರಿಗೆ ಗಾಯ, ಗುಂಡಿಟ್ಟು ಕೊಂದ ಅರಣ್ಯಾಧಿಕಾರಿಗಳು

ಕಾಡು ಹಂದಿಯೊಂದು ದಾಳಿ ನಡೆಸಿದ್ದರಿಂದ 65 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಇತರ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಳಿಕ ಕಾಡು ಹಂದಿಗೆ ಗುಂಡಿಕ್ಕಿ ಹತ್ಯೆ ಮಾಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಹಾಸನ: ಕಾಡು ಹಂದಿಯೊಂದು ದಾಳಿ ನಡೆಸಿದ್ದರಿಂದ 65 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಇತರ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಳಿಕ ಕಾಡು ಹಂದಿಗೆ ಗುಂಡಿಕ್ಕಿ ಹತ್ಯೆ ಮಾಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ರಾಜೇಗೌಡ ಹಾಗೂ ಅವರ ಪತ್ನಿ ಹೊಲದಲ್ಲಿ ಇತರ ಇಬ್ಬರು ಮಹಿಳೆಯರೊಂದಿಗೆ ಕೆಲಸ ಮಾಡುತ್ತಿದ್ದಾಗ ಹಠಾತ್ ಕಾಡು ಹಂದಿ ದಾಳಿ ನಡೆಸಿದಾಗ ತೀವ್ರವಾಗಿ ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರನ್ನು ರಕ್ಷಿಸಲು ಪ್ರಯತ್ನಿಸಿ ತೀವ್ರವಾಗಿ ಗಾಯಗೊಂಡ ಅವರ ಪತ್ನಿ ಶಾಂತಮ್ಮ ಹಾಗೂ ಮಹಿಳೆ ನಂಜಮ್ಮ ಅವರನ್ನು ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಗೆ ನಂತರ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಹಂದಿ ಇತರರ ಮೇಲೆ ದಾಳಿ ಮಾಡದಂತೆ ನಿಯಂತ್ರಿಸಲು ಸ್ಥಳೀಯರು ದೊಣ್ಣೆಯಿಂದ ಹೊಡೆದಿದ್ದಾರೆ. ಆದರೂ  ಪ್ರಯೋಜನವಾಗಲಿಲ್ಲ. ಇತರ ಮೇಲೂ  ದಾಳಿ ನಡೆಸುತಿತ್ತು. ಇದರಿಂದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಂದೂಕಿನಿಂದ ಕಾಡು ಹಂದಿಯನ್ನು ಹೊಡೆದುರುಳಿಸಿದರು ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT