ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ವ್ಯಕ್ತಿ, ಪುತ್ರರ ಬಂಧನ

ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ಕೆಲಸ ನೀಡಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ ಪೊಲೀಸರು 51 ವರ್ಷದ ವ್ಯಕ್ತಿಯೊಬ್ಬನ ಮನೆಯಲ್ಲಿ ತಪಾಸಣೆ ನಡೆಸಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಪತ್ನಿಯನ್ನು ನೋಡಿಕೊಳ್ಳುತ್ತಿದ್ದರು.

ಬೆಂಗಳೂರು: ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ಕೆಲಸ ನೀಡಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ ಪೊಲೀಸರು 51 ವರ್ಷದ ವ್ಯಕ್ತಿಯೊಬ್ಬನ ಮನೆಯಲ್ಲಿ ತಪಾಸಣೆ ನಡೆಸಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಪತ್ನಿಯನ್ನು ನೋಡಿಕೊಳ್ಳುತ್ತಿದ್ದರು. 10 ಮತ್ತು 8 ವರ್ಷದ ಬಾಲಕಿಯರು ಬಿಹಾರ ಮೂಲದವರಾಗಿದ್ದು, ಪ್ರಸ್ತುತ ಸರ್ಕಾರದ ವಸತಿ ಗೃಹದಲ್ಲಿ ಇರಿಸಲಾಗಿದೆ. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖಾಸಗಿ ಸಂಸ್ಥೆಯೊಂದರಲ್ಲಿ ಹಿರಿಯ ಅಧಿಕಾರಿಯಾಗಿರುವ ಅಶೋಕ್ ಕುಮಾರ್ ಮತ್ತು ಅವರ 27 ಮತ್ತು 25 ವರ್ಷದ ಇಬ್ಬರು ಪುತ್ರರು ಬಂಧಿತರು. ಸಹೋದರಿಯರು ಅಶೋಕ್ ಕುಮಾರ್ ಅವರ ಪತ್ನಿ ಪಿಂಕಿ ಜೈನ್ ಎಂಬ ಮಹಿಳೆಯನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು. ಬಾಲಕಿಯರ ಪೋಷಕರು ಪ್ರಸ್ತುತ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದು, ಅಶೋಕ್ ಕುಮಾರ್ ಅವರ ಪುತ್ರರು ಬಾಲಕಿಯರನ್ನು ನಗರಕ್ಕೆ ಕರೆತರಲು ಅಲ್ಲಿಗೆ ಹೋಗಿದ್ದರು ಎನ್ನಲಾಗಿದೆ.

ಮೂವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಬಾಲಕಿಯರನ್ನು ಅವರ ಪೋಷಕರ ಬಳಿಗೆ ಕಳುಹಿಸಲಾಗುವುದು. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರನ್ನು ಕುಟುಂಬ ಆಧಾರಿತ ಉದ್ಯೋಗಗಳಿಗೆ ನೇಮಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ ಮತ್ತು ಯಾವುದೇ ರೀತಿಯ ಅಪಾಯಕಾರಿ ಉದ್ಯೋಗದಲ್ಲಿ ಕೆಲಸ ಮಾಡಲಾಗುವುದಿಲ್ಲ ಎಂದು ಪೊಲೀಸರು ಹೇಳಿದರು.

ಅಶೋಕ್ ಕುಮಾರ್ ಮತ್ತು ಅವರ ಪುತ್ರರ ವಿರುದ್ಧ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ  2015 ಮತ್ತು ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT