ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್ ಜೆಎನ್.1 ರೂಪಾಂತರಿ: ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ 19 ಮಾರ್ಗಸೂಚಿ ಪ್ರಕಟ

ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ.

ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸುವುದು, ವರದಿ ಸಲ್ಲಿಸುವುದು ಅಗತ್ಯವಾಗಿದೆ. ಆದರೆ, ಸರ್ವೇಕ್ಷಣೆ ಹೆಚ್ಚಳ ಅಥವಾ ನಿರ್ಬಂಧ ಹೇರುವ ಅವಶ್ಯಕತೆಯಿರುವುದಿಲ್ಲ.ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ SARI ಪ್ರಕರಣಗಳು ಹಾಗೂ 20 ಐಎಲ್ ಐ ಪ್ರಕರಣಗಳ ಪೈಕಿ 1 ಐಎಲ್ ಐ ಪ್ರಕರಣವನ್ನು ಕೋವಿಡ್-19 ಪರೀಕ್ಷೆಗೆ  ಒಳಪಡಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. 

ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಗುಂಪು ಗುಂಪಾಗಿ ಸೇರುವ ಪ್ರಕರಣಗಳು ಹಾಗೂ ಮರಣಗಳು ವರದಿಯಾಗುವ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ರವಾನಿಸಬೇಕು ಎಂದು ಸೂಚಿಸಲಾಗಿದೆ.

ತೀವ್ರ ಸ್ವರೂಪದ ರೋಗ ಲಕ್ಷಣ ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SARI ಪ್ರಕರಣಗಳು ಹಾಗೂ ಸುಧೀರ್ಘ ಅವಧಿಗೆ ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, ಕೋವಿಡ್ ಲಸಿಕೆಯ ಎರಡು ಡೋಸ್ ವ್ಯಾಕ್ತಿನ್ ಪಡೆದ ನಂತರವೂ ಸೋಂಕು ಮೃತಪಟ್ಟವರು, ಕೋವಿಡ್ -19 ಮರಣ ಪ್ರಕರಣಗಳು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗುವ 25ಕ್ಕಿಂತ ಕಡಿಮೆ CT Value ಇರುವ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಅಗತ್ಯ ಸಮನ್ವಯ ವಹಿಸಬೇಕು ಎಂದು ಹೇಳಲಾಗಿದೆ.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಡಿಸೆಂಬರ್ 3-4ನೇ ವಾರದೊಳಗೆ ಅಣಕು ಪ್ರದರ್ಶನ ಪೂರ್ಣಗೊಳಿಸಲು ಸೂಚಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT