ಲಾಂಛನದಲ್ಲಿ ಕನ್ನಡ ಬಳಕೆ 
ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಳನಳಿಸುತ್ತಿದೆ ಕನ್ನಡ: ಲಾಂಛನ ಕನ್ನಡಮಯ!

ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಸೂಚನೆ ಬೆನ್ನಲ್ಲೇ ‌ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ‌ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಸೂಚನೆ ಬೆನ್ನಲ್ಲೇ ‌ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ‌ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನವು ಸಂಪೂರ್ಣ ಆಂಗ್ಲ‌ ಭಾಷೆಯಲ್ಲಿತ್ತು. ಈ ಬಗ್ಗೆ ತಮ್ಮ‌ ಗಮನಕ್ಕೆ ಬರುತ್ತಿದ್ದಂತೆ, ಕನ್ನಡ ಮತ್ತು ಸಂಸ್ಕೃತಿ ‌ಇಲಾಖೆ‌ ಸಚಿವರಾದ ಶಿವರಾಜ್ ತಂಗಡಗಿ ಅವರು ವಿಮಾನ‌‌ ನಿಲ್ದಾಣದ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪ್ರಾಧಿಕಾರಕ್ಕೆ ಸೂಚಿಸಿದ್ದರು.

ಅದರಂತೆ ಕನ್ನಡ ಅಭಿವೃದ್ಧಿ ‌ಪ್ರಾಧಿಕಾರದ‌ ಕಾರ್ಯದರ್ಶಿ ಡಾ ಸಂತೋಷ್ ಹಾನಗಲ್ ಅವರು ವಿಮಾನ ನಿಲ್ದಾಣದ‌ ವ್ಯವಸ್ಥಾಪಕ‌ ನಿರ್ದೇಶಕರಿಗೆ ಪತ್ರ ಬರೆದು, ವಿಮಾನ ನಿಲ್ದಾಣದ ಲಾಂಛನ ಆಂಗ್ಲ ಭಾಷೆಯಲ್ಲಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ.

ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಸಂಸ್ಥೆಗಳು ಇಲ್ಲಿನ ಭಾಷಾ ಸಂಸ್ಕೃತಿ ಗೌರವಿಸುವುದು ಪ್ರಾಥಮಿಕ ಜವಾಬ್ದಾರಿ.‌ ಕೂಡಲೇ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.

ಪ್ರಾಧಿಕಾರದ ಕಾರ್ಯದರ್ಶಿ ಪತ್ರ ತಲುಪುತ್ತಿದ್ದಂತೆ ಎಚ್ಚೆತ್ತ ವಿಮಾನ‌ ನಿಲ್ದಾಣದ ‌ಅಧಿಕಾರಿಗಳು ತಮ್ಮ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಬಳಸಿದ್ದಾರೆ.‌ ಈ ಬಗ್ಗೆ ಪ್ರಾಧಿಕಾರಕ್ಕೆ‌‌ ಪತ್ರವನ್ನು ಕೂಡ ಬರೆದಿರುವ ನಿಲ್ದಾಣದ ಅಧಿಕಾರಿ ದಿನೇಶ್ ಕುಮಾರ್, ಕನ್ನಡ ಭಾಷೆ‌ ಬೆಳವಣಿಗೆ, ಇಲ್ಲಿನ ಸಂಸ್ಕೃತಿ ಉಳಿವಿಕೆಗೆ ನಾವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜತೆ ಕೆಲಸ‌ ಮಾಡಲಿದ್ದೇವೆ.

ಮುಂದಿನ‌ ನಮ್ಮ ಯಾವುದೇ ಕಾರ್ಯಕ್ರಮ ‌ಹಾಗೂ ಪತ್ರ‌‌ ವ್ಯವಹಾರದಲ್ಲಿ‌‌ ಹೆಚ್ಚಾಗಿ ಕನ್ನಡ‌ ಭಾಷೆ ಬಳಕೆ‌‌ ಮಾಡಲಾಗುವುದು. ಅಲ್ಲದೇ, ನಿಲ್ದಾಣದ ಪ್ರತಿಯೊಂದು‌‌ ಸೂಚನಾ ಫಲಕಗಳನ್ನು ಕನ್ನಡದಲ್ಲಿ‌ ಬಳಸಲಾಗುವುದು, ಸಾಮಾಜಿಕ‌ ಜಾಲತಾಣದಲ್ಲಿಯೂ ಕನ್ನಡವನ್ನು ಬಳಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT