ಓಡಿಹೋಗಿ ಮದುವೆಯಾದ ಪ್ರೇಮಿಗಳು 
ರಾಜ್ಯ

ಚಿಕ್ಕಬಳ್ಳಾಪುರ: ಓಡಿಹೋಗಿ ಮದುವೆಯಾದ ಪ್ರೇಮಿಗಳು; ಹುಡುಗನ ಮನೆಗೆ ನುಗ್ಗಿ ಹಲ್ಲೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಹುಡುಗನ ಪೋಷಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ನಡೆಸಿದ ಹುಡುಗಿಯ ತಂದೆ ಮತ್ತು ಆತನ ಮೂವರು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರೇಮಿಗಳು ಮನೆಯಿಂದ ಓಡಿಹೋಗಿ ಭಾನುವಾರ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ಮರುದಿನ ಬಾಲಕಿಯ ಮನೆಯವರಿಗೆ ವಿಷಯ ತಿಳಿದಾಗ ಅವರು ಹುಡುಗನ ಮನೆಗೆ ತೆರಳಿ ಗಲಾಟೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಹುಡುಗನ ಮನೆಯವರ ಮೇಲೆ ಹುಡುಗಿ ಕಡೆಯವರು ಹಲ್ಲೆ ನಡೆಸಿದ್ದಾರೆ.

ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಮೇಲೆ ಐದಕ್ಕೂ ಹೆಚ್ಚು ಮಂದಿ ರಾಡ್ ಮತ್ತು ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹುಡುಗನ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 148, 149, 323 ಹಾಗೂ 324 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್