ಕೇರಳದಲ್ಲಿ ಕೋವಿಡ್ ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದಲ್ಲಿ ವಾಹನಗಳ ತಪಾಸಣೆ ಚುರುಕು 
ರಾಜ್ಯ

ಮಂಡ್ಯ: ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!

ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶುಕ್ರವಾರ ಒಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಮಂಡ್ಯ: ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶುಕ್ರವಾರ ಒಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಆರೋಗ್ಯ ತಪಾಸಣೆ ನಡೆಸಿದ ಅಧಿಕಾರಿಗಳು, ಅವರು ರೋಗ ಲಕ್ಷಣ ಹೊಂದಿಲ್ಲ, ಯಾವುದೇ ಪ್ರಯಾಣದ ಇತಿಹಾಸವನ್ನು ಹೊಂದಿಲ್ಲ, ಗ್ರಾಮದಲ್ಲಿ ಉಳಿದುಕೊಂಡಿರುವುದನ್ನು ಗುರುತಿಸಿದ್ದಾರೆ. 

ಶಸ್ತ್ರ ಚಿಕಿತ್ಸೆಗೆಂದು ತಾಲೂಕು ಆಸ್ಪತ್ರೆಗೆ ಬಂದಾಗ ಅವರನ್ನು ಪರೀಕ್ಷಿಸಲಾಗಿತ್ತು. ಅವರಿಗೆ ಪಾಸಿಟಿವ್ ದೃಢಪಟ್ಟ ನಂತರ ವೈದ್ಯರು ಕ್ವಾರಂಟೈನ್‌ಗೆ ಒಳಪಡಿಸಿದರು. ಅವರ ಕುಟುಂಬದ ನಾಲ್ವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಅವರೆಲ್ಲರಿಗೂ ನೆಗೆಟಿವ್ ಬಂದಿದೆ.

ಇದು ಜೆಎನ್.1 ರೂಪಾಂತರವಾಗಿದೆಯೇ ಎಂದು ನೋಡಲು ವೈದ್ಯಕೀಯ ಸಿಬ್ಬಂದಿ ಪರೀಕ್ಷೆಗೆ ಪ್ರಕರಣವನ್ನು ಉಲ್ಲೇಖಿಸಿಲ್ಲ, ಅವರಿಗೆ ರೋಗಲಕ್ಷಣಗಳಿಲ್ಲದ ಕಾರಣ ಎದೆಯ ಸಿಟಿ ಸ್ಕ್ಯಾನ್ ಸಹ ಮಾಡಲಾಗಿಲ್ಲ. ರೋಗಿಯು ಸಾಮಾನ್ಯವಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು. 

ಸಂಭಾವ್ಯ ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲೆಯ ಎಲ್ಲಾ ಆರು ತಾಲೂಕುಗಳಲ್ಲಿ ಆಕ್ಸಿಜನ್ ಪ್ಲಾಂಟ್‌ಗಳನ್ನು ಸಜ್ಜುಗೊಳಿಸಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಆಕ್ಸಿಜನ್ ಸ್ಥಾವರದಲ್ಲಿ ಕೆಟ್ಟು ಹೋಗಿರುವ ಸೆನ್ಸಾರ್ ದುರಸ್ತಿಗೆ ಕ್ರಮಕೈಗೊಳ್ಳಲಾಗಿದೆ ಎಂದು ಮೋಹನ್ ತಿಳಿಸಿದರು. ಈ ಮಧ್ಯೆ ಶಬರಿಮಲೆ ಯಾತ್ರೆ ಮತ್ತು ಇತರ ಕಾರಣಗಳಿಗಾಗಿ ಕೇರಳಕ್ಕೆ ಪ್ರಯಾಣಿಸುವವರ ಮೇಲೆ ನಿಗಾ ಇಡುವ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT