ಎಫ್ಐಆರ್ (ಸಾಂಕೇತಿಕ ಚಿತ್ರ) 
ರಾಜ್ಯ

ಬೆಳಗಾವಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿತ; ಸಂಕೇಶ್ವರ ಪಟ್ಟಣದಲ್ಲಿ ಉದ್ವಿಗ್ನತೆ, ಐವರ ವಿರುದ್ಧ ಎಫ್‌ಐಆರ್

ಛತ್ರಪತಿ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕಾಗಿ ಯುವಕರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣವು ಉದ್ವಿಗ್ನಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಒಬ್ಬನನ್ನು ಬಂಧಿಸಿದ್ದಾರೆ.

ಬೆಳಗಾವಿ: ಛತ್ರಪತಿ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕಾಗಿ ಯುವಕರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣವು ಉದ್ವಿಗ್ನಗೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಒಬ್ಬನನ್ನು ಬಂಧಿಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಸಂಕೇಶ್ವರ ಪಟ್ಟಣದ ಸಮೀಪದ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗುಂಪೊಂದು, ಕೂಡಲೇ ಬಾವುಟವನ್ನು ತೆರವು ಮಾಡುವಂತೆ ಒತ್ತಾಯಿಸಿತು.

ಇದಕ್ಕೆ ನಿರಾಕರಿಸಿದಾಗ ಕನ್ನಡ ಧ್ವಜವನ್ನು ಅಳವಡಿಸಿದ ಯುವಕರ ಮೇಲೆ ಗುಂಪು ಹಲ್ಲೆ ನಡೆಸಿದೆ. ಬಳಿಕ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ನಿಟ್ಟಿನಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಈ ಸಂಬಂಧ ಪೊಲೀಸರು ಕೊನೆಗೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಅವರ ಪ್ರತಿಮೆಗಳನ್ನು ಒಟ್ಟಿಗೆ ಸ್ಥಾಪಿಸುವ ಪ್ರಸ್ತಾವನೆ ಇತ್ತು. ಆದಾಗ್ಯೂ, ಪ್ರಸ್ತಾವನೆಯು ವಿರೋಧವನ್ನು ಎದುರಿಸಿತು ಮತ್ತು ಪ್ರತಿಮೆಗಳನ್ನು ಪ್ರತ್ಯೇಕ ಸ್ಥಳಗಳಲ್ಲಿ ಸ್ಥಾಪಿಸಲು ಒತ್ತಾಯಿಸಲಾಯಿತು. ಈ ಬೆಳವಣಿಗೆಗಳ ನಡುವೆ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಅಳವಡಿಸಿದ್ದು ಘಟನೆಗೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!