ಎಫ್ಐಆರ್ (ಸಾಂಕೇತಿಕ ಚಿತ್ರ) 
ರಾಜ್ಯ

ಬೆಳಗಾವಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿತ; ಸಂಕೇಶ್ವರ ಪಟ್ಟಣದಲ್ಲಿ ಉದ್ವಿಗ್ನತೆ, ಐವರ ವಿರುದ್ಧ ಎಫ್‌ಐಆರ್

ಛತ್ರಪತಿ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕಾಗಿ ಯುವಕರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣವು ಉದ್ವಿಗ್ನಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಒಬ್ಬನನ್ನು ಬಂಧಿಸಿದ್ದಾರೆ.

ಬೆಳಗಾವಿ: ಛತ್ರಪತಿ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕಾಗಿ ಯುವಕರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣವು ಉದ್ವಿಗ್ನಗೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಒಬ್ಬನನ್ನು ಬಂಧಿಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಸಂಕೇಶ್ವರ ಪಟ್ಟಣದ ಸಮೀಪದ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗುಂಪೊಂದು, ಕೂಡಲೇ ಬಾವುಟವನ್ನು ತೆರವು ಮಾಡುವಂತೆ ಒತ್ತಾಯಿಸಿತು.

ಇದಕ್ಕೆ ನಿರಾಕರಿಸಿದಾಗ ಕನ್ನಡ ಧ್ವಜವನ್ನು ಅಳವಡಿಸಿದ ಯುವಕರ ಮೇಲೆ ಗುಂಪು ಹಲ್ಲೆ ನಡೆಸಿದೆ. ಬಳಿಕ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ನಿಟ್ಟಿನಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಈ ಸಂಬಂಧ ಪೊಲೀಸರು ಕೊನೆಗೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಅವರ ಪ್ರತಿಮೆಗಳನ್ನು ಒಟ್ಟಿಗೆ ಸ್ಥಾಪಿಸುವ ಪ್ರಸ್ತಾವನೆ ಇತ್ತು. ಆದಾಗ್ಯೂ, ಪ್ರಸ್ತಾವನೆಯು ವಿರೋಧವನ್ನು ಎದುರಿಸಿತು ಮತ್ತು ಪ್ರತಿಮೆಗಳನ್ನು ಪ್ರತ್ಯೇಕ ಸ್ಥಳಗಳಲ್ಲಿ ಸ್ಥಾಪಿಸಲು ಒತ್ತಾಯಿಸಲಾಯಿತು. ಈ ಬೆಳವಣಿಗೆಗಳ ನಡುವೆ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಅಳವಡಿಸಿದ್ದು ಘಟನೆಗೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT