ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಾನ್ ಬ್ರೋಕರ್ ದರೋಡೆ ಪ್ರಕರಣ, ಐವರ ಬಂಧನ, 60 ಲಕ್ಷ ರು. ವಶ

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆಂದು ವ್ಯಕ್ತಿಯೊಬ್ಬರಿಗೆ 80 ಲಕ್ಷರೂ. ವಂಚಿಸಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆಂದು ವ್ಯಕ್ತಿಯೊಬ್ಬರಿಗೆ 80 ಲಕ್ಷರೂ. ವಂಚಿಸಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಇರ್ಫಾನ್ , ರಿಜ್ವಾನ್ , ದಿವಾಕರ, ಸತೀಶ್ ,ಅಶ್ರಫ್  ಬಂಧಿತ ಆರೋಪಿಗಳು. ಕಳೆದ ವಾರ ಡಿ.11 ರಂದು ಬಸವೇಶ್ವರ ನಗರದ ಆದರ್ಶ್ ಲೇಔಟ್ ನಲ್ಲಿ  ಘಟನೆ ನಡೆದಿತ್ತು. ಪಾನ್ ಬ್ರೋಕರ್ ಕೆಲಸ ಮಾಡುವ ಸಂಕೇತ್ ಎಂಬಾತನಿಂದ ಈ ಗ್ಯಾಂಗ್ ಹಣ ದೋಚಿತ್ತು.

ಕಡಿಮೆ ಬೆಲೆಗೆ ದುಬೈ ನಿಂದ ಚಿನ್ನ ತರಿಸಿದ್ದೇವೆ. ಹಣ ತೆಗೆದುಕೊಂಡು ಬನ್ನಿ ದುಬೈ ರೇಟಿಗೆ ಚಿನ್ನ ಕೊಡ್ತೇವೆ ಎಂದು ಸಂಕೇತ್ ಪುಸಲಾಯಿಸಿ ಆದರ್ಶ ನಗರಕ್ಕೆ ಕರೆಸಿಕೊಂಡಿದ್ದ ಅರೋಪಿಗಳು.

ಡಿಸೆಂಬರ್ 11ರಂದು ಕೆಜಿಎ್ ಮೂಲದ ಪಾನ್ ಬ್ರೋಕರ್ ಸಂಕೇತ್ ಎಂಬಾತನ ಬಳಿ 80 ಲಕ್ಷ ರೂ. ಸುಲಿಗೆ ಮಾಡಿದ್ದರು. ಆರೋಪಿಗಳನ್ನು ಬಂಧಿಸಿ 55 ಲಕ್ಷ ರೂ. ಜಪ್ತಿ ಮಾಡಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಕೆಜಿಎಫ್ ರಾಬರ್ಟಸನ್ ಪೇಟೆಯಲ್ಲಿ ಪಾನ್ ಬ್ರೋಕರ್ ಆಗಿದ್ದ ಸಂಕೇತ್ ಜೈನ್, ಬೆಂಗಳೂರಿಗೆ ವ್ಯವಹಾರ ಸಲುವಾಗಿ ಬಂದು ಹೋಗುತ್ತಿದ್ದರು. ಸಂಬಂಧಿಕರ ಮೂಲಕ ಕುರುಬರಹಳ್ಳಿಯಲ್ಲಿ ಜಿಮ್ ನಡೆಸುತ್ತಿರುವ ಮಹಮ್ಮದ್ ರಿಜ್ವಾನ್, ಪರಿಚಯವಾಗಿದೆ.

ಬಸವೇಶ್ವರದ ಆರ್ದಶ್ ಲೇಔಟ್ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಕಾರಿನಿಂದ ಸಂಕೇತ್‌ನನ್ನು ತಳ್ಳಿ ಆರೋಪಿಗಳು ಪರಾರಿಯಾಗಿದ್ದರು. ಸ್ಥಳೀಯರ ಸಹಾಯದಿಂದ ಸಂಕೇತ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆನಂತರ ದೂರು ಸಲ್ಲಿಸಿದದರು. ಇದರ ಮೇರೆಗೆ ತನಿಖೆ ಕೈಗೊಂಡು ಆರೋಪಿಯ ಮಾಹಿತಿ ಕಲೆ ಹಾಕಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT