ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಾನ್ ಬ್ರೋಕರ್ ದರೋಡೆ ಪ್ರಕರಣ, ಐವರ ಬಂಧನ, 60 ಲಕ್ಷ ರು. ವಶ

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆಂದು ವ್ಯಕ್ತಿಯೊಬ್ಬರಿಗೆ 80 ಲಕ್ಷರೂ. ವಂಚಿಸಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆಂದು ವ್ಯಕ್ತಿಯೊಬ್ಬರಿಗೆ 80 ಲಕ್ಷರೂ. ವಂಚಿಸಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಇರ್ಫಾನ್ , ರಿಜ್ವಾನ್ , ದಿವಾಕರ, ಸತೀಶ್ ,ಅಶ್ರಫ್  ಬಂಧಿತ ಆರೋಪಿಗಳು. ಕಳೆದ ವಾರ ಡಿ.11 ರಂದು ಬಸವೇಶ್ವರ ನಗರದ ಆದರ್ಶ್ ಲೇಔಟ್ ನಲ್ಲಿ  ಘಟನೆ ನಡೆದಿತ್ತು. ಪಾನ್ ಬ್ರೋಕರ್ ಕೆಲಸ ಮಾಡುವ ಸಂಕೇತ್ ಎಂಬಾತನಿಂದ ಈ ಗ್ಯಾಂಗ್ ಹಣ ದೋಚಿತ್ತು.

ಕಡಿಮೆ ಬೆಲೆಗೆ ದುಬೈ ನಿಂದ ಚಿನ್ನ ತರಿಸಿದ್ದೇವೆ. ಹಣ ತೆಗೆದುಕೊಂಡು ಬನ್ನಿ ದುಬೈ ರೇಟಿಗೆ ಚಿನ್ನ ಕೊಡ್ತೇವೆ ಎಂದು ಸಂಕೇತ್ ಪುಸಲಾಯಿಸಿ ಆದರ್ಶ ನಗರಕ್ಕೆ ಕರೆಸಿಕೊಂಡಿದ್ದ ಅರೋಪಿಗಳು.

ಡಿಸೆಂಬರ್ 11ರಂದು ಕೆಜಿಎ್ ಮೂಲದ ಪಾನ್ ಬ್ರೋಕರ್ ಸಂಕೇತ್ ಎಂಬಾತನ ಬಳಿ 80 ಲಕ್ಷ ರೂ. ಸುಲಿಗೆ ಮಾಡಿದ್ದರು. ಆರೋಪಿಗಳನ್ನು ಬಂಧಿಸಿ 55 ಲಕ್ಷ ರೂ. ಜಪ್ತಿ ಮಾಡಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಕೆಜಿಎಫ್ ರಾಬರ್ಟಸನ್ ಪೇಟೆಯಲ್ಲಿ ಪಾನ್ ಬ್ರೋಕರ್ ಆಗಿದ್ದ ಸಂಕೇತ್ ಜೈನ್, ಬೆಂಗಳೂರಿಗೆ ವ್ಯವಹಾರ ಸಲುವಾಗಿ ಬಂದು ಹೋಗುತ್ತಿದ್ದರು. ಸಂಬಂಧಿಕರ ಮೂಲಕ ಕುರುಬರಹಳ್ಳಿಯಲ್ಲಿ ಜಿಮ್ ನಡೆಸುತ್ತಿರುವ ಮಹಮ್ಮದ್ ರಿಜ್ವಾನ್, ಪರಿಚಯವಾಗಿದೆ.

ಬಸವೇಶ್ವರದ ಆರ್ದಶ್ ಲೇಔಟ್ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಕಾರಿನಿಂದ ಸಂಕೇತ್‌ನನ್ನು ತಳ್ಳಿ ಆರೋಪಿಗಳು ಪರಾರಿಯಾಗಿದ್ದರು. ಸ್ಥಳೀಯರ ಸಹಾಯದಿಂದ ಸಂಕೇತ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆನಂತರ ದೂರು ಸಲ್ಲಿಸಿದದರು. ಇದರ ಮೇರೆಗೆ ತನಿಖೆ ಕೈಗೊಂಡು ಆರೋಪಿಯ ಮಾಹಿತಿ ಕಲೆ ಹಾಕಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT