ಪ್ರಿಯಾಂಕ್ ಖರ್ಗೆ - ಕೆಟಿ ರಾಮರಾವ್ 
ರಾಜ್ಯ

ಸಿಎಂ ಸಿದ್ದರಾಮಯ್ಯ ಹೇಳಿಕೆಯ ನಕಲಿ ವಿಡಿಯೋ ಹಂಚಿಕೆ; ಕೆಟಿಆರ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಾದ ನಕಲಿ ವಿಡಿಯೋ ಹಂಚಿಕೊಂಡ ವಿಚಾರವಾಗಿ ಬಿಆರ್‌ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಚಕಮಕಿ ಬುಧವಾರವೂ ಮುಂದುವರಿದಿದ್ದು, ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. 

ಹೈದರಾಬಾದ್: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಾದ ನಕಲಿ ವಿಡಿಯೋ ಹಂಚಿಕೊಂಡ ವಿಚಾರವಾಗಿ ಬಿಆರ್‌ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಚಕಮಕಿ ಬುಧವಾರವೂ ಮುಂದುವರಿದಿದ್ದು, ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಕೂಡ ತಿರುಗೇಟು ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರ ಭಾಷಣದ ಎಡಿಟ್ ಮಾಡಿದ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಕ್ಕಾಗಿ ಬಿಆರ್‌ಎಸ್ ಕಾರ್ಯಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಟಿಆರ್ ಬಿಜೆಪಿಯವರ ಸುಳ್ಳು ಮತ್ತು ಕುತಂತ್ರವನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

'ಬಿಆರ್‌ಎಸ್ ಮತ್ತು ಬಿಜೆಪಿ ಸಂಬಂದ ಕಳ್ಳರಂತೆ ಒಬ್ಬರಿಗೊಬ್ಬರು ನಿಕಟವಾಗಿರುವುದರಿಂದ ಇಂತಹ ಸುಳ್ಳು ಸುದ್ದಿಗಳು ಈಗ ದೈನಂದಿನ ವ್ಯವಹಾರವಾಗುತ್ತಿವೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ. ನಿಮ್ಮ ಮಾಹಿತಿಗಾಗಿ, ಸಂಕ್ಷಿಪ್ತ ಮತ್ತು ಸಂಪೂರ್ಣ ವಿಡಿಯೋವನ್ನು ನೋಡಿ' ಎಂದು ಸಿದ್ದರಾಮಯ್ಯ ಅವರ ಪೂರ್ಣ ಭಾಷಣದ ಲಿಂಕ್ ಅನ್ನು ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ.
'ಇದಕ್ಕಾಗಿಯೇ ಕರ್ನಾಟಕ ಸರ್ಕಾರವು ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿಗಳ ವಿರುದ್ಧ ಹೋರಾಡಲು ಹೊಸ ಸೆಲ್‌ನೊಂದಿಗೆ ಬರುತ್ತಿದೆ' ಎಂದು ಖರ್ಗೆ ಹೇಳಿದರು.

ಖರ್ಗೆ ಅವರ ವಾಗ್ದಾಳಿಗೆ ಕೌಂಟರ್ ನೀಡಿದ ಕೆಟಿಆರ್, ಕೆಲವು ಪತ್ರಿಕೆಗಳ ತುಣುಕುಗಳನ್ನು ಪೋಸ್ಟ್ ಮಾಡಿ, 'ಕರ್ನಾಟಕದ ಯುವಕರಿಗೆ 2 ಲಕ್ಷ ಉದ್ಯೋಗ ಒದಗಿಸುವ ಬಗ್ಗೆ ನಿಮ್ಮ ನಾಯಕ ರಾಹುಲ್ ಗಾಂಧಿ ಹೇಳಿಕೆ ಮತ್ತು ರಾಜ್ಯದ ಭೊಕ್ಕಸ ಖಾಲಿಯಾಗಿರುವ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗಳು ಸಹ ನಕಲಿಯೇ' ಎಂದು ಪ್ರಶ್ನಿಸಿದ್ದಾರೆ.

'ಬಡಿ, ನಾವು ತೆಲಂಗಾಣದಲ್ಲಿ ಮೂವರು ಸಂಸದರು ಸೇರಿದಂತೆ ಬಿಜೆಪಿಯ ಎಲ್ಲಾ ಪ್ರಮುಖರನ್ನು ಸೋಲಿಸಿದ್ದೇವೆ, ಕಾಂಗ್ರೆಸ್ ಪಕ್ಷವಲ್ಲ. ಸುನೀಲ್ ಮತ್ತು ತಂಡದ ಪ್ರಚಾರದಿಂದ ನೀವು ಛಿದ್ರಗೊಳ್ಳುವ ಮೊದಲು ಎಚ್ಚರಿಕೆಯಿಂದಿರಿ / ಸಿದ್ಧರಾಗಿರಿ' ಎಂದು ಬಿಆರ್‌ಎಸ್ ನಾಯಕ ಹೇಳಿದ್ದಾರೆ.

ಮಂಗಳವಾರ, ಬಿಆರ್‌ಎಸ್ ನಾಯಕ ಕರ್ನಾಟಕ ಮುಖ್ಯಮಂತ್ರಿ ಭಾಷಣದ ಎಡಿಟ್ ಮಾಡಿದ ವಿಡಿಯೋವನ್ನು ಹಂಚಿಕೊಂಡ ನಂತರ ಕೆಟಿಆರ್ ಮತ್ತು ಸಿದ್ದರಾಮಯ್ಯ ಮಾತಿನ ಸಮರದಲ್ಲಿ ತೊಡಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT