ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪೊಲೀಸರ ವೇಷದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 1 ಕೋಟಿ ರೂ. ದರೋಡೆ ಮಾಡಿದ್ದ ಎಂಟು ಮಂದಿ ಬಂಧನ

ಎಚ್‌ಎಂಟಿ ಲೇಔಟ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸವನ್ನು ಲೂಟಿ ಮಾಡಿದ್ದ ಎಂಟು ನಕಲಿ ಪೊಲೀಸರ ತಂಡವನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಡಿಸೆಂಬರ್ 4 ರಂದು ರಾತ್ರಿ 7.30ರ ಸುಮಾರಿಗೆ ಮನೋಹರ್ ಮನೆಗೆ ನುಗ್ಗಿದ್ದರು. ಪಾಲಿ ಫಿಲ್ಮ್ ಸಂಸ್ಥೆಯ ಮಾಲೀಕ ಮನೋಹರ್ ಘಟನೆ ವೇಳೆ ಮನೆಯಲ್ಲಿ ಇರಲಿಲ್ಲ.

ಬೆಂಗಳೂರು: ಎಚ್‌ಎಂಟಿ ಲೇಔಟ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸವನ್ನು ಲೂಟಿ ಮಾಡಿದ್ದ ಎಂಟು ನಕಲಿ ಪೊಲೀಸರ ತಂಡವನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಡಿಸೆಂಬರ್ 4 ರಂದು ರಾತ್ರಿ 7.30ರ ಸುಮಾರಿಗೆ ಮನೋಹರ್ ಮನೆಗೆ ನುಗ್ಗಿದ್ದರು. ಪಾಲಿ ಫಿಲ್ಮ್ ಸಂಸ್ಥೆಯ ಮಾಲೀಕ ಮನೋಹರ್ ಘಟನೆ ವೇಳೆ ಮನೆಯಲ್ಲಿ ಇರಲಿಲ್ಲ.

ಉದ್ಯಮಿಯ ಪುತ್ರನ ಮೇಲೆ ದಾಳಿ ನಡೆಸಿ 60 ಲಕ್ಷ ನಗದು, 700 ಗ್ರಾಂ ಚಿನ್ನಾಭರಣ ಸೇರಿದಂತೆ ಒಂದು ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು.

ಉದ್ಯಮಿಯ ಪತ್ನಿ ಸುಜಾತಾ ಅವರು ಪೊಲೀಸ್ ಸಮವಸ್ತ್ರದಲ್ಲಿದ್ದ ಆರೋಪಿಗಳನ್ನು ತಮ್ಮ ಪತಿ ಮತ್ತು ಅತ್ತೆಯ ನಡುವಿನ ಕಾನೂನು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನೆಗೆ ಬಂದಿದ್ದಾರೆ ಎಂದು ಭಾವಿಸಿ ಮನೆಯೊಳಗೆ ಸೇರಿಸಿಕೊಂಡಿದ್ದರು. ಆರೋಪಿಗಳನ್ನು ತಡೆಯಲು ಯತ್ನಿಸಿದ ಆಕೆಯ ಮಗ ರೂಪೇಶ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಸದ್ಯ ರೂಪೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ, ಆರೋಪಿಗಳು ಮನೆಯಿಂದ ಓಡಿಹೋಗುವಾಗ ತಮ್ಮ ಗುರುತನ್ನು ಮರೆಮಾಚಲು ಡಿಜಿಟಲ್ ವಿಡಿಯೋ ರೆಕಾರ್ಡರ್ ಅನ್ನು ಕಿತ್ತುಕೊಂಡಿದ್ದರು. ಪೀಣ್ಯ ಪೊಲೀಸರು ಕಳವು ಮಾಡಿದ ವಸ್ತುಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆರೋಪಿಗಳನ್ನು ವಿವಿಧೆಡೆಯಿಂದ ಬಂಧಿಸಲಾಗಿದೆ. ಎಲ್ಲ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT