ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿ: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಕ್ಕಾಗಿ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಹಾವೇರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನಗರ ಸಶಸ್ತ್ರ ಮೀಸಲು (ಸಿಎಆರ್) ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಕುಂಕುಮಗಾರ, ಹಿರೇಕೆರೂರು ಪಟ್ಟಣದ ಸಮೀಪವಿರುವ ಭೋಗಾವಿ ಗ್ರಾಮದಲ್ಲಿ ವಾಸವಾಗಿದ್ದರು.

ಮೂಲತಃ ಬಲಿಜ ಸಮುದಾಯದ ಕುಂಕುಮಗಾರ ಜಾತಿಗೆ ಸೇರಿದ ಇವರು ಚನ್ನದಾಸರ ಸಮುದಾಯದವರು ಎಂದು ಸುಳ್ಳು ಜಾತಿ ಪತ್ರ ನೀಡಿದ್ದಾರೆ. ಕುಂಕುಮಗಾರ ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಪ್ರಮಾಣಪತ್ರವನ್ನು ಪಡೆಯಲು, ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಇತರ ದಾಖಲೆಗಳನ್ನು ಹಿರೇಕೆರೂರಿನಲ್ಲಿ ತಹಸೀಲ್ದಾರ್ ಅವರಿಗೆ ಸಲ್ಲಿಸಿದ್ದರು.

ಭೋಗಾವಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹನುಮಂತಪ್ಪ ತಳವಾರ ಈ ವಂಚನೆಗೆ ಸಹಕರಿಸಿದ್ದಾರೆ.
ಅಪರಾಧಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ಯಶಸ್ವಿಯಾಗಿ ಸ್ಥಾನ ಪಡೆದಿದ್ದಾರೆ. ಜಿಲ್ಲಾಧಿಕಾರಿ ನಡೆಸಿದ ತನಿಖೆ ಮತ್ತು ವಿಶೇಷ ಸಮಿತಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಿತು. ನಂತರ ಅವರ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ನ್ಯಾಯಾಧೀಶ ಜಿಎಲ್ ಲಕ್ಷ್ಮೀನಾರಾಯಣ ಅವರು ಬುಧವಾರ ತೀರ್ಪು ಪ್ರಕಟಿಸಿದ್ದು, ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಸರೋಜಾ ಜಿ. ಕೂಡಲಗಿಮಠ ಅವರು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT