ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಮನೆ-ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದರು. 
ರಾಜ್ಯ

ಬೆಂಗಳೂರು: ಮನೆ-ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದ ತುಷಾರ್‌ ಗಿರಿನಾಥ್‌

ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ನಗರದ ವಿವಿಧೆಡೆ ಗುರುವಾರ ಸಂಚಾರ ನಡೆಸಿದರು.

ಬೆಂಗಳೂರು: ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ನಗರದ ವಿವಿಧೆಡೆ ಗುರುವಾರ ಸಂಚಾರ ನಡೆಸಿದರು.

ನ.27ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಡಿ.9ರವರೆಗೆ ಆಕ್ಷೇಪಣೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು. ಇದಾದ ನಂತರ ಬಿಎಲ್‌ಓ ಮತ್ತು ಮೇಲ್ವಿಚಾರಕರು ಮತದಾರರ ಪಟ್ಟಿ ಪರಿಷ್ಕರಿಸುವ ಕಾರ್ಯ ಮಾಡಿದ್ದಾರೆ.

ಕೆಲ ಮನೆಗಳಿಗೆ ಭೇಟಿ ನೀಡಿದ ತುಷಾರ್ ಗಿರಿನಾಥ್ ಅವರು ಪರಿಷ್ಕರಿಸಿರುವ ಪಟ್ಟಿಯನ್ನು ‘ಸೂಪರ್‌ ಚೆಕ್ಕಿಂಗ್’ ಮಾಡಿದರು.

ಶಾಂತಿನಗರ ಹಾಗೂ ಶಿವಾಜಿನಗರದ ವಿಧಾನಸಭೆ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ನೀಡಲು ತುಷಾರ್‌ ಗಿರಿನಾಥ್‌ ಸೂಚಿಸಿದರು.

ಶಾಂತಿನಗರ ಹಾಗೂ ಶಿವಾಜಿನಗರದ ವಿಧಾನಸಭೆ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ನೀಡಲು ತುಷಾರ್‌ ಗಿರಿನಾಥ್‌ ಸೂಚಿಸಿದರು.

‘ಸೂಪರ್ ಚೆಕ್ಕಿಂಗ್ ಮಾಡಿ ಎಲ್ಲವೂ ಸರಿಯಿದ್ದು, ನಮೂನೆಗಳಿಗೆ ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜೊತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಯ ಜೊತೆ ಮಾತನಾಡಿ, ಒಂದು ಕಡೆ ಹೆಸರನ್ನು ತೆಗೆಸಬೇಕು’ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ವಿಶೇಷ ಆಯುಕ್ತ (ಚುನಾವಣೆ) ಆರ್ ರಾಮಚಂದ್ರನ್, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಉತ್ತರ) ಸ್ನೇಹಲ್ ಆರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!