ಸಂಗ್ರಹ ಚಿತ್ರ 
ರಾಜ್ಯ

ಆತಂಕ ಬೇಡ, ಎಚ್ಚರಿಕೆ ವಹಿಸಿ: ಮಾರ್ಗಸೂಚಿ ಪ್ರಕಟಿಸಿದ ಖಾಸಗಿ ಶಾಲೆಗಳ ಒಕ್ಕೂಟ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್)ವು ತನ್ನ ವ್ಯಾಪ್ತಿಯ ಶಾಲೆಗಳಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್)ವು ತನ್ನ ವ್ಯಾಪ್ತಿಯ ಶಾಲೆಗಳಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಿದೆ.

ವಿದ್ಯಾರ್ಥಿಗಳಿಗೆ ಜ್ವರ, ಸಾಂಕ್ರಾಮಿಕವಿದ್ದರೆ ನಿರ್ಲಕ್ಷಿಸದೆ ವೈದ್ಯಕೀಯ ಆರೈಕೆ ಪಡೆಯಲು ನಿರ್ದೇಶನ ನೀಡಿ. ಪರೀಕ್ಷೆ ಅಥವಾ ತರಗತಿಗಳು ಕೈತಪ್ಪಲಿವೆ ಎಂಬ ನೆಪ ನೀಡಿ ಮಕ್ಕಳನ್ನು ಶಾಲೆಗೆ ಕಳಹಿಸುವ ಪಾಲಕರನ್ನು ಪ್ರೋತ್ಸಾಹಿಸಬೇಡಿ. ಸಾಂಕ್ರಾಮಿಕ ರೋಗ ಕುರಿತು ಶಾಲೆಗಳಲ್ಲಿ ಆತಂಕ ಸೃಷ್ಟಿಸಬೇಡಿ. ಅದರ ಬದಲಾಗಿ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಬೇಕು. ವಿವಿಧ ರೂಪಾಂತರ ಇರುವುದರಿಂದ ಹೆಚ್ಚಿನ ಕಾಳಜಿ ವಹಿಸಿ ಸೋಂಕುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಸೂಚಿಸಿದೆ.

ಶಾಲೆ ಮತ್ತು ಮನೆಯ ವಾತಾವರಣ ನೈರ್ಮಲ್ಯವಾಗಿರುವಂತೆ ಕ್ರಮ ಕೈಗೊಳ್ಳುವುದು. ಶಾಲೆಯಲ್ಲಿ ಹಠಾತ್ ಅಸ್ವಸ್ಥರಾದ ಮಕ್ಕಳನ್ನು ಪ್ರತ್ಯೇಕವಾಗಿರಿಸಿ ಎಚ್ಚರಿಕೆ ವಹಿಸುವುದು. ತಕ್ಷಣವೇ ಪಾಲಕರ ಗಮನಕ್ಕೆ ತಂದು ಸಲಹೆ ನೀಡುವುದು. ರಜಾ ದಿನಗಳಂದು ಪಾಲಕರೊಂದಿಗೆ ಯಾತ್ರಾ ಸ್ಥಳಗಳು, ಜನಸಂದಣಿಯಿಂದ ಕೂಡಿರುವ ಪ್ರವಾಸಿ ತಾಣಗಳಿಗೆ ಹೋಗುವ ವೇಳೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಶಾಲಾ ಪ್ರವಾಸ ಕೈಗೊಂಡಿದ್ದಲ್ಲಿ ಪೋರ್ಟಬಲ್ ಆಮ್ಲಜನಕ ಕಿಟ್ ಅನ್ನು ಕೊಂಡೊಯ್ಯಿರಿ. ಅಗತ್ಯವಿದ್ದಲ್ಲಿ ಕ್ಯಾಮ್ಸ್ ಅನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಕ್ಯಾಮ್ಸ್ ಹೊರಡಿಸಿರುವ ಈ ಮಾರ್ಗಸೂಚಿಗೆ ಪೋಷಕರ ಸಮನ್ವಯ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಸಲಹೆ ನೀಡುವ ಮುನ್ನ ಕ್ಯಾಮ್ಸ್ ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸಿಲ್ಲ ಎಂದು ಆರೋಪಿಸಿದೆ.

ಸರ್ಕಾರ ಯಾವುದೇ ಹೇಳಿಕೆ ನೀಡದಿರುವಾಗ ಬೇರೆ ಯಾವುದೇ ಸಂಸ್ಥೆ ಮಾರ್ಗಸೂಚಿಗಳನ್ನು ಹೇಗೆ ಹೊರಡಿಸುತ್ತದೆ ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT