ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್ ಪತ್ತೆ: ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್

ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ.

ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಜ್ವರ, ಕೆಮ್ಮು ಎಂದು ಟೆಸ್ಟ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ಸದ್ಯ ತೀವ್ರ ಉಸಿರಾಟದ ತೊಂದರೆ (ಸಾರಿ) ಕೇಸ್ ಹಿನ್ನೆಲೆ ತಾಲೂಕು ಆಸ್ಪತ್ರೆಯಲ್ಲಿ ಮಗುವನ್ನು ಐಸೋಲೆಷನ್‍ನಲ್ಲಿ ಇರಿಸಲಾಗಿದೆ.

ಸ್ವರ್ಶ ಮಕ್ಕಳ ಧಾಮದಲ್ಲಿ ಮೊದಲ‌ ಕೊರೊನಾ ಕೇಸ್ ಹಿನ್ನೆಲೆಯಲ್ಲಿ ಮಕ್ಕಳ ಧಾಮದ 21 ಮಂದಿ ಮಕ್ಕಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಟೆಸ್ಟಿಂಗ್ ಮಾಡಲಾಗಿದೆ. ಗಂಟಲು ದ್ರವ ಸ್ಯಾಂಪಲ್ ಪಡೆದು ಅಧಿಕಾರಿಗಳು ಟೆಸ್ಟಿಂಗ್ ಗೆ ಕಳುಹಿಸಲಾಗಿದೆ.

ಪಾಸಿಟಿವ್‌ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಸಿಬ್ಬಂದಿ ಮಕ್ಕಳ ಧಾಮ ಹಾಗೂ ಶಾಲೆಗೆ ಸ್ಯಾನಿಟೈಸ್ ಮಾಡಲಿದ್ದಾರೆ. ಟೆಸ್ಟಿಂಗ್ ರಿಪೋರ್ಟ್ ಬರುವವರೆಗೂ ಎಲ್ಲಾ ಮಕ್ಕಳು ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಶಾಲೆ ಹಾಗೂ ಮಕ್ಕಳಧಾಮದಲ್ಲಿ ಕೆಮ್ಮು, ನೆಗಡಿ ಹಾಗೂ ಜ್ವರ ಇದೆಯಾ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಮಕ್ಕಳ‌ ಜೊತೆ ಸಂಪರ್ಕದಲ್ಲಿದ್ದವರ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT