ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಸಹೋದ್ಯೋಗಿಗಳಿಂದಲೇ ಮಹಿಳಾ ಪೊಲೀಸ್ ಪೇದೆಯ ಸಿಡಿಆರ್ ಸೋರಿಕೆ, ಕಿರುಕುಳ ಪ್ರಕರಣ ದಾಖಲು

ಆಘಾತಕಾರಿ ಪ್ರಕರಣದಲ್ಲಿ, ಕಲಬುರಗಿ ನಗರದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರ ಕರೆ ವಿವರಗಳ ವರದಿಯನ್ನು (ಸಿಡಿಆರ್) ಸಹ ಪೋಲೀಸರು ಆಕೆಗೆ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗೆ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಲಬುರಗಿ: ಆಘಾತಕಾರಿ ಪ್ರಕರಣದಲ್ಲಿ, ಕಲಬುರಗಿ ನಗರದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರ ಕರೆ ವಿವರಗಳ ವರದಿಯನ್ನು (ಸಿಡಿಆರ್) ಸಹ ಪೋಲೀಸರು ಆಕೆಗೆ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗೆ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂತ್ರಸ್ತ ಮಹಿಳಾ ಪೊಲೀಸ್ ಪೇದೆ, ಕಲಬುರಗಿ ನಗರದ ಪೊಲೀಸ್ ಕಮಿಷನರ್ ಆರ್ ಚೇತನ್ ಕುಮಾರ್ ಅವರಿಗೆ ದೂರು ಸಲ್ಲಿಸಿ, ತನಗೆ ಮಾನಸಿಕವಾಗಿ ಹಿಂಸೆ ನೀಡುತ್ತಿರುವ ಮತ್ತು ತನ್ನ ಖಾಸಗಿತನವನ್ನು ಉಲ್ಲಂಘಿಸಿದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕಲಬುರಗಿ ನಗರದ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಸಂತ್ರಸ್ತೆಯ ಸಿಡಿಆರ್ ವಿವರಗಳನ್ನು ಪಡೆದು ಖಾಸಗಿ ವ್ಯಕ್ತಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರೆ ವಿವರಗಳನ್ನು ಪಡೆದುಕೊಂಡ ನಂತರ, ಮಹಿಳೆಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ಅಪರಾಧಗಳು ಮತ್ತು ಇತರ ಪ್ರಮುಖ ಪ್ರಕರಣಗಳಲ್ಲಿ ಆರೋಪಿಗಳ ಮೊಬೈಲ್ ಸಂಖ್ಯೆಗಳ ಸಿಡಿಆರ್ ವಿವರಗಳನ್ನು ಸಾಮಾನ್ಯವಾಗಿ ಪಡೆಯಲಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ಆರೋಪಿ ಪೊಲೀಸರು ಮಹಿಳಾ ಪೇದೆಯ ಮೊಬೈಲ್ ಸಂಖ್ಯೆಯನ್ನು ಇತರೆ ಆರೋಪಿಗಳ ಸಂಪರ್ಕ ಸಂಖ್ಯೆಗಳ ಪಟ್ಟಿಗೆ ಸೇರಿಸಿ ಹಿರಿಯ ಅಧಿಕಾರಿಯಿಂದ ಒಪ್ಪಿಗೆ ಪಡೆದಿದ್ದಾರೆ ಎನ್ನಲಾಗಿದೆ.

ಮಹಿಳಾ ಪೇದೆಯೊಬ್ಬರ ಮೊಬೈಲ್ ಫೋನ್ ಕರೆ ವಿವರ ಪಡೆದು ಕಿರುಕುಳ ನೀಡಿದ ಬಗ್ಗೆ ದೂರು ಬಂದಿದೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿಸಿರುವುದಾಗಿ ಆಯುಕ್ತ ಚೇತನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಪ್ರಕರಣದ ತನಿಖೆಯನ್ನು ಡಿಸಿಪಿ ಕನಿಕಾ ಸಿಕ್ರಿವಾಲ್ ನಡೆಸುತ್ತಿದ್ದು, ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆದ್ಯತೆ ಮೇರೆಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯು ವ್ಯಕ್ತಿಯ ಗೌಪ್ಯತೆಯ ಉಲ್ಲಂಘನೆಯನ್ನು ಒಳಗೊಂಡಿರುವುದರಿಂದ ಕಳವಳ ಉಂಟುಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT