ಮೃತ ಮಗು ಸಾಯಿದಾ 
ರಾಜ್ಯ

ಬೆಂಗಳೂರು: ಮನೆ ಮುಂದೆ ಆಟವಾಡುವಾಗ ನೀರಿನ ಸಂಪ್‌ಗೆ ಬಿದ್ದು ಮಗು ಸಾವು!

ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಮೃತ ಮಗು. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮನೆ ಎದುರು ಆಟವಾಡುವಾಗ ಬಾಗಿಲು ತೆರೆದಿದ್ದ ಸಂಪ್‌ಗೆ ಬಿದ್ದು ನೀರಿನಲ್ಲಿ ಮುಳುಗಿ ಅಸ್ವಸ್ಥವಾಗಿತ್ತು. ಕೂಡಲೇ ಮಗುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಿಸದೆ ತಡರಾತ್ರಿ ಮಗು ಮೃತಪಟ್ಟಿದೆ ಎಂದು ಪೊಲೀಸರು ಹೇಳಿದರು.

ಚಿತ್ರದುರ್ಗ ಮೂಲದ ಸೈಯದ್‌ ಹುಸೇನ್‌ ದಂಪತಿಗೆ ನಾಲ್ವರು ಮಕ್ಕಳು. ಈ ಪೈಕಿ ಮೃತ ಸಾಯಿದಾ ನಾಲ್ಕನೇ ಮಗು. ಗಾರೆ ಕೆಲಸ ಮಾಡುವ ಸೈಯದ್‌ ಕೆಲ ವರ್ಷಗಳಿಂದ ಕುಟುಂಬದ ಜತೆ ಬಾಗಲಗುಂಟೆಯಲ್ಲಿ ವಾಸವಾಗಿದ್ದಾರೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕುಟುಂಬದ ಸದಸ್ಯರು ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಮಗು ಸಾಯಿದಾ ಆಟವಾಡಲು ಮನೆಯಿಂದ ಹೊರಗೆ ಬಂದಿದ್ದಾಳೆ. ಈ ವೇಳೆ ಮನೆ ಎದುರಿನ ಸಂಪ್‌ ಬಾಗಿಲು ತೆರೆದಿದ್ದು, ಸಾಯಿದಾ ಅದರೊಳಗೆ ಬಿದ್ದು ನೀರಿನಲ್ಲಿ ಮುಳುಗಿದ್ದಾಳೆ.

ಇದೇ ಸಮಯಕ್ಕೆ ಆಕೆಯ ತಾತ ಮನೆಯಿಂದ ಹೊರಗೆ ಬಂದಿದ್ದು. ಸಾಯಿದಾಗಾಗಿ ಹುಡುಕಾಡಿದ್ದಾರೆ. ಎಲ್ಲೂ ಪತ್ತೆಯಾಗಿಲ್ಲ. ಬಳಿಕ ಸಂಪ್‌ ಬಳಿ ಬಂದು ನೋಡಿದಾಗ ಸಾಯಿದಾ ನೀರಿನಲ್ಲಿ ಬಿದ್ದು ಒದ್ದಾಡುತ್ತಿದ್ದಳು. ಕೂಡಲೇ ಆಕೆಯನ್ನು ಮೇಲಕ್ಕೆ ಎತ್ತಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫ‌ಲಿಸದೆ ಸಾಯಿದಾ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT