ಸಿಎಂ ಸಿದ್ದರಾಮಯ್ಯ, ಯತ್ನಾಳ್ 
ರಾಜ್ಯ

ಹಣ ಉಳಿತಾಯ ಮಾಡಲು ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ- ಯತ್ನಾಳ್ ಕಿಡಿ

ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ್ದು ಇನ್ನೂ ಮಾಸದೆ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಇಂತಹುದೇ ಘಟನೆ ವರದಿಯಾಗಿದೆ.

ಬೆಂಗಳೂರು: ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ್ದು ಇನ್ನೂ ಮಾಸದೆ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಇಂತಹುದೇ ಘಟನೆ ವರದಿಯಾಗಿದೆ.

ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದಲೇ  ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ಇದರ ವಿರುದ್ಧ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿ ಹಂಚಿಕೊಂಡಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮುಗ್ಧ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹಣವನ್ನು ಉಳಿತಾಯ ಮಾಡುವುದಕ್ಕೆ ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ ಎಂದು ಟೀಕಿಸಿದ್ದಾರೆ. 

ಸ್ವಚ್ಛ ಮಾಡುವ ಕೆಲಸದಿಂದ ಹಿಡಿದು ಬಿಸಿಯೂಟದವರೆಗೂ ಸ್ಪಷ್ಟವಾದ ಪ್ರಮಾಣಿತ ಕಾರ್ಯಾಚರಣಾ ವಿಧಾನ ಇರಬೇಕು.  ಹಾಗೂ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕಾದದ್ದು ಶಾಲೆ ಹಾಗೂ ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ

ಬೆಂಗಳೂರು: ಆಡಳಿತ ಮಂಡಳಿ ಕಿರುಕುಳ; ಡೆಂಟಲ್ ಕಾಲೇಜು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

I-PAC ದಾಳಿಗೆ ಸಿಎಂ ಮಮತಾ ಅಡ್ಡಿ: ಸಿಬಿಐ ತನಿಖೆ ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ED ಅರ್ಜಿ

ಶಬರಿಮಲೆ 'ಚಿನ್ನ ಕಳ್ಳತನ' ಪ್ರಕರಣ: SIT ತನಿಖೆ, ಪ್ರಧಾನ ಅರ್ಚಕ ಬಂಧನ!

'ನಿಮ್ಮ ದೇಶದ ಬಗ್ಗೆ ಚಿಂತಿಸಿ': ಇರಾನ್‌ನಲ್ಲಿ ಹಿಂಸಾಚಾರದ ನಡುವೆ ಯುವಕರಿಗೆ ಖಮೇನಿ ಕರೆ; ವಿದೇಶಿ ಶಕ್ತಿಗಳಿಗೆ ಇಸ್ಲಾಮಿಕ್ ದೇಶ ಬಗ್ಗಲ್ಲ!

SCROLL FOR NEXT