ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್ ಹೆಚ್ಚಳ: ತುರ್ತು ಪರಿಸ್ಥಿತಿ ನಿಭಾಯಿಸಲು ಬಿಎಂಸಿಆರ್ ಐ, ಬಿಬಿಎಂಪಿ ಸನ್ನದ್ಧ!

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ)  ಕೋವಿಡ್ ಶಂಕಿತರಿಗಾಗಿ  ಪ್ರತ್ಯೇಕ ಚಿಕಿತ್ಸೆ ಪ್ರದೇಶ ಸ್ಥಾಪನೆ ಸಾರಿ ಮತ್ತು ಐಎಲ್ಐ ರೋಗಿಗಳಿಂದ ಗಂಟಲು ಸ್ವ್ಯಾಬ್ ಸಂಗ್ರಹಿಸುವಂತಹ  ಸಿದ್ಧತೆಗಳನ್ನು ಪ್ರಾರಂಭಿಸಿದೆ.

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ)  ಕೋವಿಡ್ ಶಂಕಿತರಿಗಾಗಿ  ಪ್ರತ್ಯೇಕ ಚಿಕಿತ್ಸೆ ಪ್ರದೇಶ ಸ್ಥಾಪನೆ ಸಾರಿ ಮತ್ತು ಐಎಲ್ಐ ರೋಗಿಗಳಿಂದ ಗಂಟಲು ಸ್ವ್ಯಾಬ್ ಸಂಗ್ರಹಿಸುವಂತಹ  ಸಿದ್ಧತೆಗಳನ್ನು ಪ್ರಾರಂಭಿಸಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ, ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕ ತಪಾಸಣಾ ಪ್ರದೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಮೈಕ್ರೋಬಯಾಲಜಿ ವಿಭಾಗದಲ್ಲಿ ಪ್ರತಿದಿನ ಕೋವಿಡ್ ಗಾಗಿ ನಿಯಮಿತ ಪರೀಕ್ಷೆ ನಡೆಯುತ್ತಿದೆ.

ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದುವರೆಗೆ 1,791 ಆರ್ ಟಿಪಿಸಿಆರ್ ಮತ್ತು 472 Rat ಪರೀಕ್ಷೆಗಳನ್ನು ನಡೆಸಲಾಗಿದೆ ಮತ್ತು 93 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಪ್ರಕರಣಗಳನ್ನು ಎದುರಿಸಲು ಬಿಬಿಎಂಪಿ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ವಿವಿಧ ವಿಭಾಗಗಳ ಮೂಲಕ ಅಗತ್ಯ ಸಿಬ್ಬಂದಿ ಮತ್ತು ಸಲಕರಣೆಗಳನ್ನು ಕ್ರೋಡೀಕರಿಸಿ ರೋಗಿಗಳ ಆರೈಕೆಗೆ ಬಳಸಿಕೊಳ್ಳಲಾಗುತ್ತಿದೆ. ಸಾಕಷ್ಟು ವೈದ್ಯರು, ದಾದಿಯರು, ತಂತ್ರಜ್ಞರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೆಂಟಿಲೇಟರ್‌ಗಳು, ಪಿಪಿಇ ಕಿಟ್‌ಗಳು, ಎನ್ -95 ಮಾಸ್ಕ್‌ಗಳು, ಆಕ್ಸಿಜನ್ ಸಿಲಿಂಡರ್‌ಗಳು, ಲಿಕ್ವಿಡ್ ಆಕ್ಸಿಜನ್ ಟ್ಯಾಂಕ್‌ಗಳು, ಆಕ್ಸಿಜನ್ ಜನರೇಟರ್‌ಗಳು ಆಮ್ಲಜನಕದ ಸಾಂದ್ರೀಕರಣ ಇತ್ಯಾದಿ ಉಪಕರಣಗಳಿವೆ ಎಂದು ಬಿಬಿಎಪಿ ಮತ್ತು ಬಿಎಂಸಿಆರ್ ಐ ಎರಡೂ ಹೇಳಿಕೊಂಡಿವೆ.

ಡಿಸೆಂಬರ್ 22 ರಂದು ವರದಿಯಾದ ಒಟ್ಟು ಪಾಸಿಟಿವ್ ಪ್ರಕರಣಗಳು: 78

ಒಟ್ಟು ಸಕ್ರಿಯ ಪ್ರಕರಣಗಳು: 175 (ICU ನಲ್ಲಿ 6, ಸಾಮಾನ್ಯ ಹಾಸಿಗೆಯಲ್ಲಿ 7, 162 ಮನೆಯಲ್ಲಿ ಪ್ರತ್ಯೇಕತೆ)
ಒಟ್ಟು ಪರೀಕ್ಷೆಗಳು: 2,366
ಒಟ್ಟು ಸಾವು: 1
ಪಾಸಿಟಿವ್ ದರ: ಶೇ. 3.29 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT