ಮೃತ ಬಾಲಕ ಚಿರು 
ರಾಜ್ಯ

ಧಾರವಾಡ: ಲಸಿಕೆ ಪಡೆದ ಮರುದಿನವೇ 2 ವರ್ಷದ ಮಗು ಸಾವು; ಓವರ್ ಡೋಸ್ ಕಾರಣವೆಂದು ಪೋಷಕರ ಆರೋಪ

ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ.  ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ತಮಗೆ ಲಸಿಕೆ ಹಾಸಿಕಲು ಇಷ್ಟವಿಲ್ಲ ಎಂದರೂ ಆಶಾ ಕಾರ್ಯಕರ್ತೆಯರು ಬಲವಂತವಾಗಿ ಲಸಿಕೆ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಧಾರವಾಡ:  ಅಂಗನವಾಡಿ ಕೇಂದ್ರದ ಸಿಬ್ಬಂದಿಯಿಂದ ಲಸಿಕೆ ಪಡೆದ ಮರುದಿನ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದ ಉಣಕಲ್‌ನಲ್ಲಿ ನಡೆದಿದೆ.‌

ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ.  ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ತಮಗೆ ಲಸಿಕೆ ಹಾಸಿಕಲು ಇಷ್ಟವಿಲ್ಲ ಎಂದರೂ ಆಶಾ ಕಾರ್ಯಕರ್ತೆಯರು ಬಲವಂತವಾಗಿ ಲಸಿಕೆ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಬುಧವಾರ ಬಲವಂತವಾಗಿ ಆಶಾ ಕಾರ್ಯಕರ್ತೆಯರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ಲಸಿಕೆ ಹಾಕಿದ್ದಾರೆ. ಗುರುವಾರ ಆಟವಾಡುತ್ತಿದ್ದ ಮಗು ಹಠಾತ್ ಸಾವನ್ನಪ್ಪಿದೆ.  ಗುರುವಾರ ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಿದ ಬಾಲಕನ ಕುಟುಂಬದವರು ಶುಕ್ರವಾರ ಮರಣೋತ್ತರ ಪರೀಕ್ಷೆಗೆ ನಿರಾಕರಿಸಿ ಶವವನ್ನು ತಮ್ಮೊಂದಿಗೆ ಕೊಂಡೊಯ್ದರು.

ಅದೇ ಲಸಿಕೆಯನ್ನು ಇತರ ಮಕ್ಕಳಿಗೆ ನೀಡಲಾಗಿದೆ, ಅವರಲ್ಲಿ ಯಾರಿಗೂ  ಯಾವುದೇ ತೊಂದರೆ ಆಗಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ, ಆದರೆ ಘಟನೆಯ ಬಗ್ಗೆ ತನಿಖೆ ನಡೆಸಲು ಇಲಾಖೆ ಸಿದ್ಧವಾಗಿದೆ ಎಂದು ಹೇಳಿದೆ.

ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ಶಶಿ ಪಾಟೀಲ ಮಾತನಾಡಿ, ‘ಬುಧವಾರವೇ ಲಸಿಕೆ ಹಾಕಲಾಗಿದ್ದು, ಗುರುವಾರ ಮಗು ಆರೋಗ್ಯವಾಗಿದ್ದು, ಇತರ ಮಕ್ಕಳೊಂದಿಗೆ ಆಟವಾಡುತ್ತಿದೆ ಎಂದು ತಿಳಿದು ಬಂದಿದೆ. ಏಕಾಏಕಿ ಕೆಳಗೆ ಬಿದ್ದ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿನ ವೈದ್ಯರು ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿಸಿದರು. ನಾವು ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಕೊಂಡೆವು ಆದರೆ ಶುಕ್ರವಾರ ಬೆಳಗ್ಗೆ ಬಾಲಕನ ಕುಟುಂಬದವರು ನಿರಾಕರಿಸಿದರು ಮತ್ತು ಶವವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ.

ವೈದ್ಯಕೀಯ ನಿರ್ಲಕ್ಷ್ಯ ಅಥವಾ ಲಸಿಕೆಯ ಕೆಲವು ಪ್ರತಿಕ್ರಿಯೆಯಿಂದಾಗಿ ಸಾವು ಸಂಭವಿಸಿದೆ .  ಸಾವಿನ ನಿಖರವಾದ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಿದ್ದೆವು. ಆದರೆ ಈಗ ನಾವು ನಮ್ಮ ಮಗುವನ್ನು ಮರಳಿ ಪಡೆಯಲು ಸಾಧ್ಯವಿಲ್ಲ,  ಅವನ ಮರಣವಾಗಿದೆ, ಹೀಗಾಗಿ ನಮ್ಮ ಮಗುವಿಗೆ ತೊಂದರೆ ನೀಡಲು ನಾವು ಬಯಸುವುದಿಲ್ಲ. ಯಾವುದೂ ಅವನನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT