ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಯುವ ಜೋಡಿಗೆ ಕಿರುಕುಳ ನೀಡಿದ ಮೂವರ ಬಂಧನ

ಮಂಗಳೂರು ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮಂಗಳೂರು: ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಆರೋಪಿಗಳಲ್ಲಿ ಒಬ್ಬಾತ ಡಿಸೆಂಬರ್ 21 ರಂದು ಕೇರಳದ ಹುಡುಗ ಮತ್ತು ಹುಡುಗಿಯನ್ನು ಉಪಾಹಾರ ಗೃಹದಲ್ಲಿ ಕಂಡಿದ್ದಾನೆ. ಅವರು ಯಾವ ಸಮುದಾಯಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಅವರ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿದ್ದಾನೆ.

ಅವರು ಅವರಿಬ್ಬರನ್ನು ಗದರಿಸಿದ್ದಾರೆ. ಇದರಿಂದಾಗುವ ತೊಂದರೆಯನ್ನು ತಪ್ಪಿಸಿಕೊಳ್ಳಬೇಕು ಎಂದುಕೊಂಡ ಇಬ್ಬರು ಸ್ಥಳದಿಂದ ಹೊರಟು ಆಟೋರಿಕ್ಷಾ ಹತ್ತಿದ್ದಾರೆ.

ನಂತರ ಆರೋಪಿ ತನ್ನ ಇಬ್ಬರು ಸಹಚರರೊಂದಿಗೆ ಆಟೋ ನಿಲ್ಲಿಸಿ, ಚಾಲಕನ ಮೇಲೆ ದೌರ್ಜನ್ಯ ಎಸಗಿದ್ದಾನೆ.
ಚಾಲಕನ ದೂರಿನ ಮೇರೆಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಾಥಮಿಕ ವಿಚಾರಣೆ ಬಳಿಕ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT