ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಯುವ ಜೋಡಿಗೆ ಕಿರುಕುಳ ನೀಡಿದ ಮೂವರ ಬಂಧನ

ಮಂಗಳೂರು ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮಂಗಳೂರು: ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಆರೋಪಿಗಳಲ್ಲಿ ಒಬ್ಬಾತ ಡಿಸೆಂಬರ್ 21 ರಂದು ಕೇರಳದ ಹುಡುಗ ಮತ್ತು ಹುಡುಗಿಯನ್ನು ಉಪಾಹಾರ ಗೃಹದಲ್ಲಿ ಕಂಡಿದ್ದಾನೆ. ಅವರು ಯಾವ ಸಮುದಾಯಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಅವರ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿದ್ದಾನೆ.

ಅವರು ಅವರಿಬ್ಬರನ್ನು ಗದರಿಸಿದ್ದಾರೆ. ಇದರಿಂದಾಗುವ ತೊಂದರೆಯನ್ನು ತಪ್ಪಿಸಿಕೊಳ್ಳಬೇಕು ಎಂದುಕೊಂಡ ಇಬ್ಬರು ಸ್ಥಳದಿಂದ ಹೊರಟು ಆಟೋರಿಕ್ಷಾ ಹತ್ತಿದ್ದಾರೆ.

ನಂತರ ಆರೋಪಿ ತನ್ನ ಇಬ್ಬರು ಸಹಚರರೊಂದಿಗೆ ಆಟೋ ನಿಲ್ಲಿಸಿ, ಚಾಲಕನ ಮೇಲೆ ದೌರ್ಜನ್ಯ ಎಸಗಿದ್ದಾನೆ.
ಚಾಲಕನ ದೂರಿನ ಮೇರೆಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಾಥಮಿಕ ವಿಚಾರಣೆ ಬಳಿಕ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು': ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta