ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಯುವ ಜೋಡಿಗೆ ಕಿರುಕುಳ ನೀಡಿದ ಮೂವರ ಬಂಧನ

ಮಂಗಳೂರು ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮಂಗಳೂರು: ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಆರೋಪಿಗಳಲ್ಲಿ ಒಬ್ಬಾತ ಡಿಸೆಂಬರ್ 21 ರಂದು ಕೇರಳದ ಹುಡುಗ ಮತ್ತು ಹುಡುಗಿಯನ್ನು ಉಪಾಹಾರ ಗೃಹದಲ್ಲಿ ಕಂಡಿದ್ದಾನೆ. ಅವರು ಯಾವ ಸಮುದಾಯಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಅವರ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿದ್ದಾನೆ.

ಅವರು ಅವರಿಬ್ಬರನ್ನು ಗದರಿಸಿದ್ದಾರೆ. ಇದರಿಂದಾಗುವ ತೊಂದರೆಯನ್ನು ತಪ್ಪಿಸಿಕೊಳ್ಳಬೇಕು ಎಂದುಕೊಂಡ ಇಬ್ಬರು ಸ್ಥಳದಿಂದ ಹೊರಟು ಆಟೋರಿಕ್ಷಾ ಹತ್ತಿದ್ದಾರೆ.

ನಂತರ ಆರೋಪಿ ತನ್ನ ಇಬ್ಬರು ಸಹಚರರೊಂದಿಗೆ ಆಟೋ ನಿಲ್ಲಿಸಿ, ಚಾಲಕನ ಮೇಲೆ ದೌರ್ಜನ್ಯ ಎಸಗಿದ್ದಾನೆ.
ಚಾಲಕನ ದೂರಿನ ಮೇರೆಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಾಥಮಿಕ ವಿಚಾರಣೆ ಬಳಿಕ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT