ತುಷಾರ್ ಗಿರಿನಾಥ್-ಕನ್ನಡಪರ ಹೋರಾಟಗಾರರ ಭೇಟಿ 
ರಾಜ್ಯ

ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಹಾಕಲು 2 ತಿಂಗಳ ಗಡುವು: ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಹಾಕಲು ಬಿಬಿಎಂಪಿ 2 ತಿಂಗಳ ಗಡುವು ನೀಡಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಹಾಕಲು ಬಿಬಿಎಂಪಿ 2 ತಿಂಗಳ ಗಡುವು ನೀಡಿದೆ.

ಭಾನುವಾರ ಬೆಂಗಳೂರಿನಲ್ಲಿ ಕನ್ನಡ ಹೋರಾಟಗಾರರು ಮತ್ತು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬೆಂಗಳೂರಿನಲ್ಲಿ ಅಂಗಡಿಗಳು ಮತ್ತು ಸಂಸ್ಥೆಗಳಿಗೆ ಪ್ರಮುಖವಾಗಿ ಕನ್ನಡದಲ್ಲಿ ನಾಮಫಲಕಗಳನ್ನು ಹಾಕಲು 2 ತಿಂಗಳ ಗಡುವು ನೀಡಿದ್ದಾರೆ ಎನ್ನಲಾಗಿದೆ.

ಸಭೆಯ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಆಯುಕ್ತ ಗಿರಿನಾಥ್, ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ಫೆಬ್ರವರಿ 28 ರೊಳಗೆ 60 ಬೋರ್ಡ್‌ಗಳನ್ನು ಹಾಕಲು ಸರದಿಯಲ್ಲಿ ಬರುವಂತೆ ನೋಟಿಸ್ ನೀಡಲಾಗುವುದು. ಕನ್ನಡ ಭಾಷೆಗೆ ಶೇ.60 ಮತ್ತು ಉಳಿದವು ಇತರ ಭಾಷೆಗಳಿಗೆ ಶೇ.28ರಷ್ಟು ಜಾಗ ಮೀಸಲಿಡಬೇಕು ಎಂದು ಹೇಳಿದರು.

ಗಡುವು ಮೀರಿ, ಅಂಗಡಿ ಮಾಲೀಕರ ವಿರುದ್ಧ ಮಾತ್ರವಲ್ಲದೆ ಆಯಾ ವಲಯಗಳಲ್ಲಿ ನಿಯಮವನ್ನು ಜಾರಿಗೆ ತರಲು ಕಾರ್ಯ ನೀಡಿರುವ ಪ್ರಾದೇಶಿಕ ಬಿಬಿಎಂಪಿ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಮಾಲ್‌ಗಳ ಸ್ಥಿತಿಗತಿ ಕುರಿತು ಪ್ರತಿಕ್ರಿಯಿಸಿದ ಗಿರಿನಾಥ್, ‘ಎಲ್ಲಾ ಪ್ರಮುಖ ಮಾಲ್‌ಗಳ ಪ್ರತಿನಿಧಿಗಳನ್ನು ಸಭೆಗೆ ಕರೆಯಲಾಗುವುದು, ಅವರಿಗೆ ಎರಡು ತಿಂಗಳ ಕಾಲಾವಕಾಶ ನೀಡುವುದಿಲ್ಲ, ಆದರೆ ಸಭೆ ಮುಗಿದ ಸುಮಾರು ಎರಡು ವಾರಗಳ ನಂತರ ಕನ್ನಡದಲ್ಲಿ ನಾಮಫಲಕ ಹಾಕಬೇಕು, ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT