ಕ್ರೀಡಾ ಸಚಿವ ಅನುರಾಗ್‌ ಠಾಕೂರ್ 
ರಾಜ್ಯ

ಶೀಘ್ರವೇ 'ಬೆಂಗಳೂರು ಸ್ಪೋರ್ಟ್ಸ್‌ ಹಬ್‌' ಆಗಲಿದೆ: ಕ್ರೀಡಾ ಸಚಿವ ಅನುರಾಗ್‌ ಠಾಕೂರ್

ಬೆಂಗಳೂರನ್ನು ಸಿಲಿಕಾನ್​ ವ್ಯಾಲಿ ಆಫ್​ ಇಂಡಿಯಾ ಎಂದು ಕರೆಯಲಾಗುತ್ತಿದೆ, ಶೀಘ್ರದಲ್ಲೇ ಸ್ಪೋರ್ಟ್ಸ್​ ಹಬ್​ ಆಫ್​ ಇಂಡಿಯಾ ಎನಿಸಲಿದೆ ಎಂದು ಕೇಂದ್ರ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಬೆಂಗಳೂರನ್ನು ಸಿಲಿಕಾನ್​ ವ್ಯಾಲಿ ಆಫ್​ ಇಂಡಿಯಾ ಎಂದು ಕರೆಯಲಾಗುತ್ತಿದೆ, ಶೀಘ್ರದಲ್ಲೇ ಸ್ಪೋರ್ಟ್ಸ್​ ಹಬ್​ ಆಫ್​ ಇಂಡಿಯಾ ಎನಿಸಲಿದೆ ಎಂದು ಕೇಂದ್ರ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಶನಿವಾರ ಹೇಳಿದರು.

ಬೆಂಗಳೂರಿನಲ್ಲಿರುವ ಸಾಯ್‌ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾದ ರೂ.26.77 ಕೋಟಿ ವೆಚ್ಚದ ಪುರುಷರ ವಸತಿ ನಿಲಯ ಕಟ್ಟಡ, ರೂ.28.72 ಕೋಟಿ ವೆಚ್ಚದ ಮಹಿಳಾ ವಸತಿ ನಿಲಯ ಕಟ್ಟಡ ಹಾಗೂ ರೂ.3.82 ಕೋಟಿ ವೆಚ್ಚದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟಿಸಿ ನಂತರ ನಡೆದ ಮೈ ಭಾರತ್‌ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತೀಯ ಕ್ರೀಡಾ ಪ್ರಾಧಿಕಾರದ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ನೀಡುತ್ತಿದೆ. ಇದು ಅತ್ಯಾಧುನಿಕ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸಹ ಹೊಂದಿದೆ, ಕ್ರೀಡಾಪಟುಗಳ ಕಾರ್ಯಕ್ಷಮತೆಯ ಮೌಲ್ಯಮಾಪನ, ಚೇತರಿಕೆ ಮತ್ತು ಪುನರ್ವಸತಿಗೆ ಸಂಬಂಧಿಸಿದಂತೆ ಸಮಗ್ರ ನೆರವು ನೀಡುತ್ತದೆ. ಖೇಲೋ ಇಂಡಿಯಾ ಯೋಜನೆಯಡಿ ಗುರುತಿಸಲ್ಪಟ್ಟ ಉದಯೋನ್ಮುಖ ಪ್ರತಿಭೆಗಳು ತಮ್ಮ ಹಿರಿಯರಿಂದ ಅಮೂಲ್ಯವಾದ ಅನುಭವ ಪಡೆಯುವುದರೊಂದಿಗೆ ಇಲ್ಲಿರುವ ಸೌಲಭ್ಯಗಳ ಮೂಲಕ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.

ಹೊಸ ಸೌಲಭ್ಯಗಳನ್ನು ಉದ್ಘಾಟಿಸಿದ್ದು, ಹೆಮ್ಮೆಯ ಕ್ಷಣವಾಗಿದೆ. 300 ಹಾಸಿಗೆಯ ಪುರುಷರ ಹಾಸ್ಟೆಲ್ ಮತ್ತು 8 ಲೇನ್ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್ ಅನ್ನು ಉದ್ಘಾಟಿಸಿದ್ದೇನೆ. ಇವೆರಡನ್ನೂ ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದೆ. ಹೆಚ್ಚುವರಿಯಾಗಿ 330 ಹಾಸಿಗೆಗಳ ಮಹಿಳಾ ಹಾಸ್ಟೆಲ್ ಅನ್ನು ಅನಾವರಣಗೊಳಿಸಲಾಗಿದೆ. ಒಟ್ಟು ರೂ.69.35 ಕೋಟಿ ವೆಚ್ಚದಲ್ಲಿ ಈ ಸೌಲಭ್ಯಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಇಂದು ಉದ್ಘಾಟಿಸಿದ ಹೊಸ ಸೌಲಭ್ಯಗಳ ಸೇರ್ಪಡೆಯಿಂದಾಗಿ ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್​ಎಐ) ತರಬೇತಿ ಪರಿಸರ ವ್ಯವಸ್ಥೆಯನ್ನು ಗಮನಾರ್ಹವಾಗಿ ವೃದ್ಧಿಸುತ್ತದೆ, ಅಥ್ಲೆಟಿಕ್ಸ್, ಹಾಕಿ, ಪ್ಯಾರಾ - ಕ್ರೀಡೆಗಳಿಗೆ ಪ್ರಮುಖ ಕೇಂದ್ರವಾಗಿದೆ ಮತ್ತು ರಾಷ್ಟ್ರೀಯ ಮಹಿಳಾ ಮತ್ತು ಪುರುಷರ ಹಾಕಿ ತಂಡಗಳ ತರಬೇತಿ ಮೈದಾನವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT